ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರು, ಅವರ ದೋಣಿಗಳ ತಕ್ಷಣ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ

Updated on: Apr 05, 2025 | 6:59 PM

ಶ್ರೀಲಂಕಾ ಅಧ್ಯಕ್ಷರೊಂದಿಗೆ ಮೀನುಗಾರರ ಸಮಸ್ಯೆಯನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಶ್ರೀಲಂಕಾದ ಅಧಿಕಾರಿಗಳು ತಮಿಳುನಾಡಿನ ಮೀನುಗಾರರನ್ನು ಪದೇ ಪದೇ ಬಂಧಿಸುತ್ತಿರುವುದು ಎರಡೂ ದೇಶಗಳ ನಡುವಿನ ದೀರ್ಘಕಾಲದ ಸಂಘರ್ಷವಾಗಿದೆ. ವಿದೇಶಾಂಗ ಸಚಿವಾಲಯದ ವರದಿಗಳ ಪ್ರಕಾರ, ಶ್ರೀಲಂಕಾದ ಅಧಿಕಾರಿಗಳು 11 ಮೀನುಗಾರರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಜನರನ್ನು ಮಾನವೀಯ ಆಧಾರದ ಮೇಲೆ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.

ಕೊಲಂಬೋ, ಏಪ್ರಿಲ್ 5: ಭಾರತ ಮತ್ತು ಶ್ರೀಲಂಕಾ ಮೀನುಗಾರರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ (PM Modi) ತಮಿಳುನಾಡಿನ ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಮೀನುಗಾರರ ತಕ್ಷಣ ಬಿಡುಗಡೆ ಮತ್ತು ಅವರ ದೋಣಿಗಳನ್ನು ಹಿಂದಿರುಗಿಸುವಂತೆ ಕೋರಿರುವುದಾಗಿ ಹೇಳಿದ್ದಾರೆ. ತಮಿಳುನಾಡಿನ ಮೀನುಗಾರರ ಪುನರಾವರ್ತಿತ ಬಂಧನ ಮತ್ತು ಶ್ರೀಲಂಕಾ ಅಧಿಕಾರಿಗಳು ಅವರ ದೋಣಿಗಳನ್ನು ವಶಪಡಿಸಿಕೊಂಡಿರುವುದು ಎರಡೂ ದೇಶಗಳ ನಡುವಿನ ದೀರ್ಘಕಾಲದ ಸಂಘರ್ಷವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಶ್ರೀಲಂಕಾ ಅಧಿಕಾರಿಗಳು 11 ಮೀನುಗಾರರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಬಹುಶಃ ಮುಂಬರುವ ದಿನಗಳಲ್ಲಿ ಇನ್ನೂ ಕೆಲವರನ್ನು ಬಿಡುಗಡೆ ಮಾಡಬಹುದು ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More