ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

Updated on: Mar 27, 2026 | 10:47 PM

ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಕುರಿತು ಸಚಿವ ಕೆ.ಹೆಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ. ರಾಜ್ಯ ಮತ್ತು ಕೇಂದ್ರ ಒಟ್ಟಾಗಿ ಕಾರ್ಯನಿರ್ವಹಿಸುವಂತೆ ಹೇಳಿದ್ದಾರೆ. ಸೌರಶಕ್ತಿ, ಜೈವಿಕ ಇಂಧನಗಳ ಮೂಲಕ ಸ್ವಾವಲಂಬನೆ ಸಾಧಿಸುವುದು ಹಾಗೂ ಹೋಟೆಲ್ ಉದ್ಯಮಕ್ಕೆ ಹೆಚ್ಚಿನ ಬೆಂಬಲ ನೀಡುವ ಕುರಿತು ಚರ್ಚೆಗಳು ನಡೆದವು. ರಾಜ್ಯದ ಬೇಡಿಕೆಗಳಿಗೆ ಪ್ರಧಾನಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು, ಮಾರ್ಚ್​ 27: ಗಲ್ಫ್‌ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ಮಾಡಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗಿಯಾಗಿದ್ದರು. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು.  ಕೊವಿಡ್ ರೀತಿಯಂತಹ ಹೋರಾಟಕ್ಕೆ ಸಜ್ಜಾಗುವಂತೆ ತಿಳಿಸಿದ್ದಾರೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕೆಂದು ತಿಳಿಸಿದ್ದಾರೆ. ಕಮರ್ಷಿಯಲ್ ಸಿಲಿಂಡರ್‌ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More