Pariksha Pe Charcha 2026: ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು “ವರದಾನ” ಎಂದು ಸ್ವೀಕರಿಸಿ

Updated on: Feb 06, 2026 | 2:30 PM

ಪ್ರಧಾನಿ ನರೇಂದ್ರ ಮೋದಿ ಅವರು 9ನೇ 'ಪರೀಕ್ಷಾ ಪೇ ಚರ್ಚಾ 2026' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕೇವಲ ಪರೀಕ್ಷೆಗಳ ಬಗ್ಗೆ ಮಾತ್ರವಲ್ಲದೆ, ಸುಸ್ಥಿರ ಭವಿಷ್ಯಕ್ಕಾಗಿ ಜವಾಬ್ದಾರಿಯುತ ನಾಗರಿಕರಾಗಲು ಕರೆ ನೀಡಿದರು. 'ವಿಕಸಿತ ಭಾರತ'ದ ಗುರಿ ತಲುಪಲು ಸ್ವಚ್ಛತೆ ಮತ್ತು ತಂತ್ರಜ್ಞಾನವನ್ನು ವರದಾನವಾಗಿ ಬಳಸಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಸಮಾಜದಲ್ಲಿ ಸ್ವಚ್ಛತೆಯ ಅರಿವು ಮೂಡಿಸುವಲ್ಲಿ ಪಾತ್ರ ವಹಿಸಬೇಕು ಎಂದರು.

ದೆಹಲಿ, ಫೆ. 6: ಪ್ರಧಾನಿ ನರೇಂದ್ರ ಮೋದಿ ಅವರು ‘ಪರೀಕ್ಷಾ ಪೇ ಚರ್ಚಾ’ (Pariksha Pe Charcha 2026) ಕಾರ್ಯಕ್ರಮದ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾ, ಕೇವಲ ಪರೀಕ್ಷೆ ಮಾತ್ರವಲ್ಲದೆ ಸುಸ್ಥಿರ ಭವಿಷ್ಯದ ನಿರ್ಮಾಣದ ಬಗ್ಗೆಯೂ ಮಹತ್ವದ ಕರೆ ನೀಡಿದ್ದಾರೆ. ವಿದ್ಯಾರ್ಥಿಗಳನ್ನು “ಜವಾಬ್ದಾರಿಯುತ ನಾಗರಿಕರು” ಆಗುವಂತೆ ಕರೆ ನೀಡಿದರು. ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಸ್ವಚ್ಛತೆ (Cleanliness) ಮೂಲಭೂತ ಅವಶ್ಯಕತೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳು ಕೇವಲ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಮಾತ್ರವಲ್ಲದೆ, ಸಮಾಜದಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸವನ್ನೂ ಮಾಡಬೇಕು ಎಂದು ಆಶಿಸಿದರು. ತಂತ್ರಜ್ಞಾನವನ್ನು ಶಾಪ ಎಂದು ಭಾವಿಸುವ ಬದಲು ಅದನ್ನು “ವರದಾನ” ಎಂದು ಸ್ವೀಕರಿಸಬೇಕು ಎಂದು ಮೋದಿ ಹೇಳಿದರು. ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನದಿಂದ ದೂರವಿರುವುದು ಸಾಧ್ಯವಿಲ್ಲ, ಬದಲಿಗೆ ಅದನ್ನು ನಮ್ಮ ಬೆಳವಣಿಗೆಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಕಲೆ ನಮಗೆ ತಿಳಿದಿರಬೇಕು ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More