PM Modi in Chitradurga Live: ಚಿತ್ರದುರ್ಗದ ಬೃಹತ್ ಬಿಜೆಪಿ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ

Edited By:

Updated on: May 02, 2023 | 12:03 PM

ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯವನ್ನು ರಾಷ್ಟ್ರದ ನಂಬರ್ ವನ್ ರಾಜ್ಯ ಮಾಡಲು ಸಹಕರಿಸಬೇಕೆಂದು ಮೋದಿ ಜನರನ್ನು ಆಗ್ರಹಿಸಿದರು.

ಚಿತ್ರದುರ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಯ ಬೃಹತ್ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತಾಡುತ್ತಿದ್ದಾರೆ. ಎಂದಿನಂತೆ ಅವರು ಕನ್ನಡದಲ್ಲೇ (Kannada) ಭಾಷಣವನ್ನು ಆರಂಭಿಸಿ ನೆರೆದ ಜನ ಸಂತೋಷದದಿಂದ ಕೇಕೆ ಹಾಕುವಂತೆ ಮಾಡಿದರು. ಚಿತ್ರದುರ್ಗದ ಜಯದೇವ ಮುರುಘರಾಜೇಂದ್ರ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಮದಕರಿ ನಾಯಕ, ವೀರ ವನಿತೆ ಓಬವ್ವ (Obavva) ಅವರನ್ನು ನೆನೆದು ವಂದಿಸಿದರು. ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯವನ್ನು ರಾಷ್ಟ್ರದ ನಂಬರ್ ವನ್ ರಾಜ್ಯ ಮಾಡಲು ಸಹಕರಿಸಬೇಕೆಂದು ಮೋದಿ ಜನರನ್ನು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 02, 2023 12:01 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More