ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ; ಇಸ್ರೋ ಭೇಟಿ ನೇರಪ್ರಸಾರ ಇಲ್ಲಿದೆ ನೋಡಿ
ಇಸ್ರೊ ವಿಜ್ಞಾನಿಗಳ ಪರಿಶ್ರಮದಿಂದ ಚಂದ್ರಯಾನ-3 ಯಶಸ್ವಿಯಾಗಿದೆ. ಈ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇಲ್ಲಿನ ಪಿಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳ ಜೊತೆ ಕೆಲ ಹೊತ್ತು ಮಾತನಾಡಲಿದ್ದಾರೆ. ಇನ್ನು ರಾಜ್ಯ ವಿಧಾನಸಭೆ ಚುನಾವಣೆಯಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೊದಿ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ಚಂದ್ರಯಾನ-3ಯ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿಯುವ ಮೂಲಕ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿದೆ. ಈ ಚಂದ್ರಯಾನ-3ಗೆ ಹಗಲಿರುಳು ಶ್ರಮಿಸಿದ ವಿಜ್ಞಾನಿಗಳಿಗೆ ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು (ಆ.26) ದಕ್ಷಿಣ ಆಫ್ರಿಕಾ, ಗ್ರೀಕ್ ಪ್ರವಾಸ ಮುಗಿಸಿಕೊಂಡು ನೇರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದ ಪೀಣ್ಯದಲ್ಲಿರುವ ಇಸ್ರೋ (ISRO) ಕೇಂದ್ರಕ್ಕೆ ಬರಲಿದ್ದಾರೆ. ಇಲ್ಲಿ ಕೆಲಹೊತ್ತು ವಿಜ್ಞಾನಿಗಳ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಕುರಿತಾದ ಕ್ಷಣ ಕ್ಷಣ ಅಪ್ಡೆಟ್ಸ್ ಟಿವಿ9 ಡಿಜಿಟಲ್ನಲ್ಲಿ……
Published on: Aug 26, 2023 06:13 AM
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

