AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯನ್ನು ಬಿಗಿದಪ್ಪಿ ಬರಮಾಡಿಕೊಂಡ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ

ಪ್ರಧಾನಿ ನರೇಂದ್ರ ಮೋದಿ ಅವರು 56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತ ಪ್ರಧಾನಿ ಎನಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಬಿಗಿದಪ್ಪಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಇರ್ಫಾನ್ ಅಲಿ ತನ್ನ 12 ಸಂಪುಟ ಸಚಿವರೊಂದಿಗೆ ವಿಮಾನ ನಿಲ್ದಾಣ ತಲುಪಿದ್ದರು. ಪ್ರಧಾನಿ ಮೋದಿ ಅವರು ಗಯಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನಯನಾ ರಾಜೀವ್
|

Updated on: Nov 20, 2024 | 10:04 AM

Share

ಪ್ರಧಾನಿ ನರೇಂದ್ರ ಮೋದಿ ಅವರು 56 ವರ್ಷಗಳಲ್ಲಿ ಗಯಾನಾಕ್ಕೆ ಭೇಟಿ ನೀಡಿದ ಮೊದಲ ಭಾರತ ಪ್ರಧಾನಿ ಎನಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಲ್ಲಿ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಬಿಗಿದಪ್ಪಿ ಅವರನ್ನು ತಮ್ಮ ದೇಶಕ್ಕೆ ಸ್ವಾಗತಿಸಿದರು. ಇರ್ಫಾನ್ ಅಲಿ ತನ್ನ 12 ಸಂಪುಟ ಸಚಿವರೊಂದಿಗೆ ವಿಮಾನ ನಿಲ್ದಾಣ ತಲುಪಿದ್ದರು. ಪ್ರಧಾನಿ ಮೋದಿ ಅವರು ಗಯಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗಯಾನಾವು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಮತ್ತು ಭವಿಷ್ಯದಲ್ಲಿ ಭಾರತವು ವಿವಿಧ ಕ್ಷೇತ್ರಗಳಲ್ಲಿ ಅವರೊಂದಿಗೆ ಪಾಲುದಾರರಾಗಲು ಅವಕಾಶವನ್ನು ಪಡೆಯುವುದರಲ್ಲಿ ಸಂಶಯವಿಲ್ಲ.

ಇಂಧನ, ರಕ್ಷಣೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಲಾಗುವುದು. ಜಾರ್ಜ್‌ಟೌನ್‌ನಲ್ಲಿ ನಡೆಯಲಿರುವ ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆ ಇದಾಗಿದೆ. ಈ ಹಿಂದೆ, 2023 ರಲ್ಲಿ ಭಾರತದಲ್ಲಿ ನಡೆದ 17 ನೇ ಪ್ರವಾಸಿ ಭಾರತೀಯ ದಿವಸ್‌ನಲ್ಲಿ ಸಭೆಯನ್ನು ನಡೆಸಲಾಗಿತ್ತು.

ಇದೇ ಸಭೆಯಲ್ಲಿ ಅಧ್ಯಕ್ಷ ಅಲಿ ಅವರಿಗೆ ಪ್ರವಾಸಿ ಭಾರತೀಯ ಸಮ್ಮಾನ್ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯು ಅನಿವಾಸಿ ಭಾರತೀಯರು ಮತ್ತು ಭಾರತ ಮೂಲದ ಜನರಿಗೆ ಭಾರತವು ನೀಡುವ ಅತ್ಯುನ್ನತ ಗೌರವವಾಗಿದೆ. ಗಯಾನಾ ಸಂಸತ್ತಿನ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದು ಉಭಯ ದೇಶಗಳ ನಡುವಿನ ಪ್ರಜಾಸತ್ತಾತ್ಮಕ ಬಾಂಧವ್ಯ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ತೋರಿಸುತ್ತದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​