PM Narendra Modi: ಸುಡಾನ್ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ಸಿದ್ಧತೆ: ಪ್ರಧಾನಿ ಮೋದಿ
ಸಭೆಯಲ್ಲಿ ಮೋದಿಯವರು ಸುಡಾನ್ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂಘರ್ಷ ಪೀಡಿತ ಸುಡಾನ್ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಚರ್ಚಿಸುವುದಕ್ಕಾಗಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಸರ್ಕಾರಿ ಅಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು. ವಿದೇಶಾಂಗ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರರು, ಸುಡಾನ್ಗಿರುವ ಭಾರತದ ರಾಯಭಾರಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮೋದಿಯವರು ಸುಡಾನ್ನಲ್ಲಿನ ಇತ್ತೀಚಿನ ವಿದ್ಯಮಾನಗಳ ಬಗ್ಗೆ ವರದಿಯನ್ನು ಕೇಳಿದ್ದು, ಅಲ್ಲಿರುವ 3,000ಕ್ಕಿಂತಲೂ ಹೆಚ್ಚು ಭಾರತೀಯರ ಸುರಕ್ಷೆ ಬಗ್ಗೆ ಗಮನ ಹರಿಸುವಂತೆ ಹೇಳಿದ್ದಾರೆ. ಕಳೆದ ವಾರ ಸುಡಾನ್ನಲ್ಲಿ ಗುಂಡಿನ ದಾಳಿಗೆ ಬಲಿಯಾದ ಭಾರತೀಯರ ಸಾವಿಗೆ ಮೋದಿ ಸಂತಾಪ ಸೂಚಿಸಿದ್ದಾರೆ.
Loading...
Unable to load recommendations.
Follow Us
