ಎಸ್ಸಿಒ ಶೃಂಗಸಭೆ ಯಶಸ್ವಿ; ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಎಸ್ಸಿಒ ಸಂಸ್ಥೆಯ ಮುಂದಿನ 25 ವರ್ಷಗಳ ಯೋಜನೆಯ ಭಾಗವಾಗಿ, ಶೃಂಗಸಭೆಯಲ್ಲಿ ಮುಂಬರುವ ದಿನಗಳಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಹಂಚಿಕೊಳ್ಳಲಾಗಿದೆ. ಬಿಶ್ಕೆಕ್ನಲ್ಲಿ ಭಾರತದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಿರ್ಗಿಸ್ತಾನ್ನ ಸ್ಥಳೀಯ ಜನರನ್ನು ಭೇಟಿಯಾದ ಪ್ರಧಾನಿ, ಅಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ತಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಕಿರ್ಗಿಸ್ತಾನ್ನ ಜನತೆಗೆ, ಸರ್ಕಾರಕ್ಕೆ ಹಾಗೂ ಅಧ್ಯಕ್ಷ ಸಾದಿರ್ ಜಪರೋವ್ ಅವರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ನವದೆಹಲಿ, ಸೆಪ್ಟೆಂಬರ್ 1: ಕಿರ್ಗಿಸ್ತಾನ್ನ ಬಿಶ್ಕೆಕ್ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ (SCO) ಶೃಂಗಸಭೆಯ ಯಶಸ್ವಿ ಭಾಗವಹಿಸುವಿಕೆಯ ನಂತರ, ಪ್ರಧಾನಿ ನರೇಂದ್ರ ಮೋದಿ (PM Modi) ತಮ್ಮ ಕಿರ್ಗಿಸ್ತಾನ್ ಪ್ರವಾಸದ ಮುಖ್ಯಾಂಶಗಳನ್ನು ಹಂಚಿಕೊಂಡಿದ್ದಾರೆ. ಎಸ್ಸಿಒ ಶೃಂಗಸಭೆಯ ಜೊತೆಗೆ ನಡೆದ ವಿವಿಧ ದ್ವಿಪಕ್ಷೀಯ ಸಭೆಗಳು ಭಾರತಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದ್ದು, ಭವಿಷ್ಯದಲ್ಲಿ ಸಕಾರಾತ್ಮಕ ಫಲಿತಾಂಶಗಳನ್ನು ನೀಡಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ಎಸ್ಸಿಒ ಸಂಸ್ಥೆಯ ಮುಂದಿನ 25 ವರ್ಷಗಳ ಯೋಜನೆಯ ಭಾಗವಾಗಿ, ಶೃಂಗಸಭೆಯಲ್ಲಿ ಮುಂಬರುವ ದಿನಗಳಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಹಂಚಿಕೊಳ್ಳಲಾಗಿದೆ. ಬಿಶ್ಕೆಕ್ನಲ್ಲಿ ಭಾರತದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಿರ್ಗಿಸ್ತಾನ್ನ ಸ್ಥಳೀಯ ಜನರನ್ನು ಭೇಟಿಯಾದ ಪ್ರಧಾನಿ, ಅಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ತಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಕಿರ್ಗಿಸ್ತಾನ್ನ ಜನತೆಗೆ, ಸರ್ಕಾರಕ್ಕೆ ಹಾಗೂ ಅಧ್ಯಕ್ಷ ಸಾದಿರ್ ಜಪರೋವ್ ಅವರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ

