ರಾಮಮಂದಿರ ನಿರ್ಮಾಣಿಕರ ಮೇಲೆ ಪುಷ್ಪಾರ್ಚನೆ ಮಾಡಿ ಅಭಿನಂದನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 22, 2024 | 7:28 PM

ಒಂದು ದೊಡ್ಡ ಬುಟ್ಟಿಯಲ್ಲಿ ಗುಲಾಬಿ ಹೂವಿನ ಪಕಳೆಗಳನ್ನು ತುಂಬಿಕೊಂಡ ಪ್ರಧಾನಿ ಮೋದಿ ಮಂದಿರ ನಿರ್ಮಾಣದಲ್ಲಿ ಭಾಗಿಯಾದ ಎಲ್ಲರ ಮೇಲೆ ಅವುಗಳನ್ನು ಚೆಲ್ಲಿ ತಮ್ಮ ಸಂತಸ, ಕೃತಜ್ಞತೆ ಸಲ್ಲಿಸುವುದರೊಂದಿಗೆ ಅಭಿನಂದಿಸುತ್ತಿದ್ದಾರೆ. ಕೆಲಸಗಾರರನ್ನು ಸಾಲಾಗಿ ಒಂದೆಡೆ ಕೂರಿಸಲಾಗಿದೆ ಮತ್ತು ಅವರು ಟಾಟಾ ಹಾಗೂ ಎಲ್ ಅಂಡ್ ಟಿ ಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ.

ಅಯೋಧ್ಯೆ: ರಾಮ ಹುಟ್ಟಿದೂರು ಅಯೋಧ್ಯೆಯಲ್ಲೇ (Ayodhya) ರಾಮನ ಮಂದಿರವಿಲ್ಲದೆ (Ram temple) ಐದು ಶತಮಾನಗಳನ್ನು ಕಳೆದ ಭಾರತೀಯರಿಗೆ ಇವತ್ತಿನ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಭಾಷಣದಲ್ಲಿ ಹೇಳಿದ ಒಂದು ಹೊಸ ಕಾಲಚಕ್ರವನ್ನು ಸೂಚಿಸುವ ದಿನ. ಎಲ್ಲರಲ್ಲಿ ಧನ್ಯತೆ ಮತ್ತು ಸಾರ್ಥಕತೆಯ ಭಾವ ಮನೆಮಾಡಿದೆ, ಜನ ಸಂಭ್ರಮಿಸುತ್ತಿದ್ದಾರೆ. ಇನ್ನು ಮಂದಿರವನ್ನು ಕಟ್ಟಿದ ಸಂತಸ ಹೇಗಿರಬೇಡ? ಕಟ್ಟಿದವರಲ್ಲಿ ಎಲ್ಲ ಧರ್ಮ, ಜಾತಿ ಮತ್ತು ವರ್ಗದ ಜನ ಸೇರಿದ್ದಾರೆ. ಅವರಲ್ಲಿನ ಸಂತಸ ಸಂಭ್ರಮ ಇಮ್ಮಡಿಗೊಂಡಿದ್ದು ಖುದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಮೇಲೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಿದಾಗ! ದೃಶ್ಯಗಳಲ್ಲಿ ನೀವು ನೋಡಬಹುದು, ಒಂದು ದೊಡ್ಡ ಬುಟ್ಟಿಯಲ್ಲಿ ಗುಲಾಬಿ ಹೂವಿನ ಪಕಳೆಗಳನ್ನು ತುಂಬಿಕೊಂಡ ಪ್ರಧಾನಿ ಮೋದಿ ಮಂದಿರ ನಿರ್ಮಾಣದಲ್ಲಿ ಭಾಗಿಯಾದ ಎಲ್ಲರ ಮೇಲೆ ಅವುಗಳನ್ನು ಚೆಲ್ಲಿ ತಮ್ಮ ಸಂತಸ, ಕೃತಜ್ಞತೆ ಸಲ್ಲಿಸುವುದರೊಂದಿಗೆ ಅಭಿನಂದಿಸುತ್ತಿದ್ದಾರೆ. ಕೆಲಸಗಾರರನ್ನು ಸಾಲಾಗಿ ಒಂದೆಡೆ ಕೂರಿಸಲಾಗಿದೆ ಮತ್ತು ಅವರು ಟಾಟಾ ಹಾಗೂ ಎಲ್ ಅಂಡ್ ಟಿ ಸಂಸ್ಥೆಗಳಿಗೆ ಸೇರಿದವರಾಗಿದ್ದಾರೆ. ಒಂದು ಅತ್ಯುತ್ತಮ ಮತ್ತು ಅನಕರಣೀಯ ಜೆಸ್ಚರ್ ಪ್ರಧಾನಿ ಮೋದಿ ಪ್ರದರ್ಶಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 22, 2024 05:23 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.