Karnataka Assembly Polls: ಸಿಂಧನೂರು ಜನಕ್ಕೆ ಹಿಂದಿ ಅರ್ಥವಾಗುತ್ತೆ ಬಾಷಾಂತರ ಬೇಕಿಲ್ಲ ಅಂತ ತಿಳಿದು ಪ್ರಧಾನಿ ನರೇಂದ್ರ ಮೋದಿ ಖುಷ್!

ಅರುಣ್​ ಕುಮಾರ್​ ಬೆಳ್ಳಿ

Updated on: May 02, 2023 | 5:45 PM

ಅವರು ಭಾಷಣವನ್ನು ಕನ್ನಡದಲ್ಲೇ ಅರಂಭಿಸಿ ಹಿಂದಿಗೆ ತಿರುಗುವಾಗ ಜಗಜ್ಯೋತಿ ಬಸವೇಶ್ವರ ಮತ್ತು ಕಲಿಯುಗ ಕಲ್ಪತರು ರಾಘವೇಂದ್ರ ಸ್ವಾಮಿಗಳಿಗೆ ವಂದಿಸುತ್ತಾರೆ.

ರಾಯಚೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ರಾಯಚೂರಿನ ಸಿಂಧನೂರಲ್ಲಿ (Sindhanur) ಬೃಹತ್ ಚುನಾವಣಾ ಸಭೆಯನ್ನು (election rally) ಉದ್ದೇಶಿಸಿ ಮಾತಾಡಿದರು. ವೇದಿಕೆಯ ಮೇಲೆ ಸ್ಥಳೀಯ ಕಾರ್ಯಕರ್ತರು ಪ್ರಧಾನಿಯವರಿಗೆ ಕಂಬಳಿ ಹೊದಿಸಿ ಗೌರವಿಸಿದ ಬಳಿಕ ಮಾತು ಅರಂಭಿಸಿದ ಅವರು ದಹಿಸುವ ಬಿಸಿಲು ಮತ್ತು ಧಗೆ ಹೊರತಾಗಿಯೂ ಕಂಬಳಿಯನ್ನು ತಮ್ಮ ಹೆಗಲ ಮೇಲಿಂದ ತೆಗೆಯಲಿಲ್ಲ. ಸಿಂಧನೂರಿನ ಜನಕ್ಕೆ ಹಿಂದಿ ಭಾಷೆಯ ಜ್ಞಾನವಿದೆ ಅವರ ಭಾಷಣವನ್ನು ಕನ್ನಡಕ್ಕೆ ತರ್ಜುಮೆ ಮಾಡುವ ಅವಶ್ಯಕತೆಯಿಲ್ಲ ಎಂದು ಹೇಳಿದಾಗ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸುತ್ತಾರೆ. ಆದಾಗ್ಯೂ ಅವರು ಭಾಷಣವನ್ನು ಕನ್ನಡದಲ್ಲೇ ಅರಂಭಿಸಿ ಹಿಂದಿಗೆ ತಿರುಗುವಾಗ ಜಗಜ್ಯೋತಿ ಬಸವೇಶ್ವರ ಮತ್ತು ಕಲಿಯುಗ ಕಲ್ಪತರು ರಾಘವೇಂದ್ರ ಸ್ವಾಮಿಗಳಿಗೆ ವಂದಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.