ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು

Updated on: Mar 30, 2025 | 4:37 PM

ಪ್ರಧಾನಿ ಮೋದಿ ಮಾಧವ ನೇತ್ರಾಲಯ ಪ್ರೀಮಿಯಂ ಕೇಂದ್ರಕ್ಕೆ ಅಡಿಪಾಯ ಹಾಕಿದರು ಮತ್ತು ಅರ್ಹ ವೈದ್ಯರು ಜನರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವ ಮೂಲಕ ರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವುದು ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು. ಪ್ರಾದೇಶಿಕ ಭಾಷೆಗಳಲ್ಲಿ ವೈದ್ಯಕೀಯ ಶಿಕ್ಷಣ ನೀಡುವ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದ ಪ್ರಧಾನಿ, ಸರ್ಕಾರ ಈ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿದೆ ಮತ್ತು ಇದು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಸಂಭವಿಸಿದೆ ಎಂದು ಹೇಳಿದರು.

ನಾಗ್ಪುರ, ಮಾರ್ಚ್ 30: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಚೇರಿಗೆ ಭೇಟಿ ನೀಡಿದ ನಂತರ ನಾಗ್ಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದರು. ಅವರನ್ನು ಸ್ವಾಗತಿಸಲು ನಗರದ ರಸ್ತೆಗಳ ಬದಿಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿರುವುದು ಕಂಡುಬಂದಿತು. ಈ ವೇಳೆ ಜನರು ಹೂವುಗಳನ್ನು ಮೋದಿಯವರತ್ತ ಹಾಕುತ್ತಾ ಜೈ ಶ್ರೀರಾಮ್ ಘೋಷಣೆ ಕೂಗಿದರು. ಈ ರೋಡ್ ಶೋಗೂ ಮೊದಲು ಪ್ರಧಾನಿ ಮೋದಿ (PM Modi) ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಸೋಲಾರ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಲಿಮಿಟೆಡ್ ಸೌಲಭ್ಯ ಕೇಂದ್ರಕ್ಕೆ ಕೂಡ ಭೇಟಿ ನೀಡಿದರು. ಅದಕ್ಕೂ ಮೊದಲು ಪ್ರಧಾನ ಮಂತ್ರಿ ಮೋದಿ ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರಿಗೆ ಪುಷ್ಪ ನಮನ ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More