ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿಯ ನಂತರ ಬಳಿಕ ಧಾರವಾಡದ ಐಐಟಿ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ

ಧಾರವಾಡದ ಐಐಟಿ ಕಟ್ಟಡಗಳನ್ನು ರೂ. 850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ನಾಳಿನ ಕಾರ್ಯಕ್ರಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ ಮಂಡ್ಯದ ಮದ್ದೂರಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು (Bengaluru-Mysuru NH) ಲೋಕಾರ್ಪಣೆ ಮಾಡಿದ ನಂತರ ಹುಬ್ಬಳ್ಳಿಗೆ ತೆರಳಿ ಧಾರವಾಡದಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (Indian Institute of Technology, Dharwad) ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಧಾರವಾಡ ಐಐಟಿ ಕಟ್ಟಡಗಳನ್ನು ರೂ. 850 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ನಾಳಿನ ಕಾರ್ಯಕ್ರಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಟ್ಟಡ ಮತ್ತು ಕಾರ್ಯಕ್ರಮದ ಬಗ್ಗೆ ಒಂದು ವಾಕ್ ಥ್ರೂ ಮಾಡಿರುವ ಟಿವಿ9 ಕನ್ನಡ ವಾಹಿನಿ ಧಾರವಾಡ ಪ್ರತಿನಿಧಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us