ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳಿಂದಲೇ ನಾವೆಲ್ಲ ಗೆಲ್ಲಲಿದ್ದೇವೆ: ಯದುವೀರ್ ಕೃಷ್ಣದತ್ ಒಡೆಯರ್

ಅರುಣ್​ ಕುಮಾರ್​ ಬೆಳ್ಳಿ

Updated on: May 03, 2024 | 11:43 AM

ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.

ದಾವಣಗೆರೆ: ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ (Gayathri Siddeshwara) ಪರ ಪ್ರಚಾರ ಮಾಡಲು ನಗರಕ್ಕೆ ಅಗಮಿಸಿರುವ ಯದುವೀರ್ ಕೃಷ್ಣದತ್ ಒಡೆಯರ್ (Yaduveer Krishna Dutt Wodeyar) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ ರಾಜ್ಯದಲ್ಲೂ ಮೋದಿ ಅಲೆ (Modi wave) ಇದೆ, ಜನರೆಲ್ಲ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗುವುದನ್ನು ಎದುರು ನೋಡುತ್ತಿದ್ದಾರೆ, ಮೊದಲ ಹಂತದ ಮತದಾನ ನಡೆದ ಎಲ್ಲ 14 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು. ಮೋದಿಯವರ ಎರಡನೇ ಅವಧಿಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ, ದೇಶದ ಆರ್ಥಿಕ ಸ್ಥಿತಿಯಲ್ಲಿ ಮಹತ್ತರ ಬದಲಾವಣೆಯಾಗಿದೆ ಅವರು ವಿಶ್ವನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಯದುವೀರ್ ಹೇಳಿದರು. ಬಿಜೆಪಿ ಸಾಧನೆ ಏನೂ ಇಲ್ಲ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ, ಅದರೆ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಭಾರತ ಕಂಡಿರುವ ಅಭಿವೃದ್ಧಿ ನಮ್ಮ ಕಣ್ಣ ಮುಂದಿದೆ, ಅವರ ಸಾಧನೆಗಳ ಫಲದಿಂದಲೇ ನಾವೆಲ್ಲ ಗೆಲ್ಲೋದು ಎಂದು ಅವರು ಹೇಳಿದರು. ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿದ ಪ್ರಶ್ನೆಗೆ ಯದುವೀರ್, ಆ ವಿಷಯದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿಕೆ ನೀಡಿದ್ದಾರೆ ಮತ್ತು ಸರ್ಕಾರದ ನಿಲುವನ್ನು ಪ್ರಕಟಿಸಿದ್ದಾರೆ, ತನಿಖೆ ಪೂರ್ಣಗೊಂಡ ಬಳಿಕ ತಾನು ಹೇಳಿಕೆ ನೀಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನಷ್ಟು ಓದಿ:   Yaduveer: ಜನರ ಆಶೀರ್ವಾದದಿಂದ ನೀವು ಸಂಸತ್ತಿಗೆ ಬರುತ್ತೀರಿ: ಯದುವೀರ್​ಗೆ ಪ್ರಧಾನಿ ಮೋದಿ ಪತ್ರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.