Assembly Polls: ಪ್ರಧಾನಿ ನರೇಂದ್ರ ಮೋದಿ ಮಂಡ್ಯಗೆ ಹತ್ತು ಸಲ ಬಂದರೂ ಜೆಡಿಎಸ್ ಅವಕಾಶಗಳ ಮೇಲೆ ಪ್ರಭಾವ ಬೀರಲಾರರು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 13, 2023 | 2:29 PM

ಅಸಲಿಗೆ ಪ್ರಧಾನ ಮಂತ್ರಿಯವರಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಕಾಮೆಂಟ್ ಮಾಡಲು ಸರಕಿಲ್ಲ, ಹೆಚ್ ಡಿ ದೇವೇಗೌಡರು ದೇಶದ ಪ್ರಧಾನಿಯಾಗಿ ಮತ್ತು ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಸ್ವಚ್ಛ ಆಡಳಿತ ನೀಡಿರುವುದನ್ನು ಅವರು ನೋಡಿದ್ದಾರೆ ಎಂದು ಹೇಳಿದರು.

ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮಂಡ್ಯ ಜಿಲ್ಲೆಗೆ ಬಂದಿದ್ದೂ ಗೊತ್ತಿಲ್ಲ, ಹೋಗಿದ್ದೂ ಗೊತ್ತಿಲ್ಲ, ಅವರು ಇಲ್ಲಿಗೆ ಒಮ್ಮೆಯಲ್ಲ ಹತ್ತು ಸಲ ಬಂದು ಹೋದರೂ ಜೆಡಿಎಸ್ ಪಕ್ಷದ ಅವಕಾಶಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ ಎಂದು ಪಕ್ಷದ ಧುರೀಣ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ಜಿಲ್ಲೆಯ ಹಿರಿಸಾವೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು, ಅಸಲಿಗೆ ಪ್ರಧಾನ ಮಂತ್ರಿಯವರಲ್ಲಿ ಜೆಡಿಎಸ್ ಪಕ್ಷದ ಬಗ್ಗೆ ಕಾಮೆಂಟ್ ಮಾಡಲು ಸರಕಿಲ್ಲ, ಹೆಚ್ ಡಿ ದೇವೇಗೌಡರು (HD Devegowda) ದೇಶದ ಪ್ರಧಾನಿಯಾಗಿ ಮತ್ತು ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಸ್ವಚ್ಛ ಆಡಳಿತ ನೀಡಿರುವುದನ್ನು ಅವರು ನೋಡಿದ್ದಾರೆ ಎಂದು ಹೇಳಿದರು. ಪ್ರಧಾನ ಮಂತ್ರಿಗಳು ತಮ್ಮ ಬಣ್ಣದ ಮಾತುಗಳಿಂದ ಜನರನ್ನು ಇನ್ನು ಮರುಳು ಮಾಡಲಾರರು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.