Karnataka Assembly Polls; ದಾವಣಗೆರೆ ಹೆಬ್ಬಾಳ ಟೋಲ್ ಬಳಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ರೂ. 39 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು ಪೊಲೀಸ್ ವಶಕ್ಕೆ

Updated on: Apr 07, 2023 | 3:59 PM

ಮೂಲಗಳ ಪ್ರಕಾರ ಚುನಾವಣಾಧಿಕಾರಿ ಅಶ್ವಥ್ ಕಾರಿನ ತಪಾಸಣೆ ನಡೆಸಿ ಬೆಳ್ಳಿವಸ್ತುಗಳ ಜೊತೆ ಕಾರನ್ನೂ ಸೀಜ್ ಮಾಡಿದ್ದಾರೆ.

ದಾವಣಗೆರೆ: ಕರ್ನಾಟಕ ವಿಧಾನಸಭಾ ಚುನಾವಣೆ (Assembly polls) ರಂಗೇರುತಿದ್ದಂತೆಯೇ, ದಾಖಲಯಿಲ್ಲದೆ ಸಾಗಿಸುವ ಹಣ ಮತ್ತು ವಸ್ತುಗಳನ್ನು ಪೊಲೀಸ ಮತ್ತು ಚುನಾವಣಾಧಿಕಾರಿಗಳು ಜಪ್ತಿ ಮಾಡುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಜಿಲ್ಲೆಯ ದಾವಣಗೆರೆ ತಾಲ್ಲೂಕಿನ ಹೆಬ್ಬಾಳ ಟೋಲ್ (Hebbal toll plaza) ಬಳಿ ದಾಖಲೆಯಿಲ್ಲದೆ ಐಷಾರಾಮಿ ಕಾರೊಂದರಲ್ಲಿ ಸಾಗಿಸಲಾಗುತ್ತಿದ್ದ ರೂ. 39 ಲಕ್ಷ ಮೌಲ್ಯದ 66ಕೆಜಿ ಬೆಳ್ಳಿಯ ಸಾಮಾನುಗಳನ್ನು ಜಪ್ತು ಮಾಡಲಾಗಿದೆ. ಕಾರು ಮಹಾರಾಷ್ಟ್ರ ರಾಜ್ಯದಲ್ಲಿ ನೋಂದಣಿಯಾಗಿದೆ. ಮೂಲಗಳ ಪ್ರಕಾರ ಚುನಾವಣಾಧಿಕಾರಿ ಅಶ್ವಥ್ (Ashwath) ಕಾರಿನ ತಪಾಸಣೆ ನಡೆಸಿ ಬೆಳ್ಳಿವಸ್ತುಗಳ ಜೊತೆ ಕಾರನ್ನೂ ಸೀಜ್ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More