ಡಿಎನ್​ಎ ಟೆಸ್ಟ್​ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್​ ಆದ ಪವಿತ್ರಾ ಗೌಡ

Updated on: Jun 19, 2024 | 10:31 PM

ಡಿಎನ್​ಎ ಟೆಸ್ಟ್​ ಸಲುವಾಗಿ ಇಂದು (ಜೂನ್​ 19) ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ಪೊಲೀಸ್​ ವ್ಯಾನ್​ನಲ್ಲಿ ಕುಳಿತಿದ್ದ ನಟಿ ಪವಿತ್ರಾ ಗೌಡ ಸಖತ್​ ಆತಂಕದಲ್ಲಿ ಇದ್ದಂತೆ ಕಾಣಿಸಿತು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚುರುಕುಕೊಂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಮತ್ತು ಮೃತನ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಅವರು ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಹತ್ಯೆ ಕೇಸ್​ನಲ್ಲಿ ಅವರು ಎ1 ಆಗಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಕಾರಣಕ್ಕಾಗಿಯೇ ಆತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಲಾಯಿತು ಎಂಬ ಆರೋಪ ಇದೆ. ಕೊಲೆ ನಡೆದ ಸ್ಥಳದಲ್ಲಿ ಅನೇಕ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ಆರೋಪಿಗಳ ಡಿಎನ್​ಎ ಟೆಸ್ಟ್ (DNA Test)​ ಮಾಡಿಸಲಾಗಿದೆ. ಘಟನೆಯ ಸ್ಥಳದಲ್ಲಿ ಸಿಕ್ಕ ಕೂದಲು, ರಕ್ತಕ್ಕೆ ಆರೋಪಿಗಳ ಸ್ಯಾಂಪಲ್ಸ್​ ಮ್ಯಾಚ್​ ಆಗಲಿದೆಯಾ ಎಂದು ಪರೀಕ್ಷೆ ಮಾಡಲಾಗುತ್ತಿದೆ. ಡಿಎನ್​ಎ ಪರೀಕ್ಷೆ ಸಲುವಾಗಿ ಪವಿತ್ರಾ ಗೌಡ ಸೇರಿ 9 ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಪೊಲೀಸ್​ ವ್ಯಾನ್​ನಲ್ಲಿ ಕುಳಿತ ಪವಿತ್ರಾ ಗೌಡ ಸಿಕ್ಕಾಪಟ್ಟೆ ಆತಂಕದಲ್ಲಿ ಇದ್ದಂತೆ ಕಾಣಿಸಿತು. ಪೊಲೀಸ್​ ಕಸ್ಟಡಿ ಸದ್ಯದಲ್ಲೇ ಕೊನೆಗೊಳ್ಳಲಿದೆ. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ. ಒಂದು ವೇಳೆ ಆ ರೀತಿ ಆದರೆ ಜೈಲಿನಲ್ಲಿ ಪವಿತ್ರಾ ಗೌಡ ಕಾಲ ಕಳೆಯಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More