ಡಿಎನ್​ಎ ಟೆಸ್ಟ್​ ಮಾಡಿಸಲು ಆಸ್ಪತ್ರೆಗೆ ತೆರಳುವಾಗಿ ಟೆನ್ಷನ್​ ಆದ ಪವಿತ್ರಾ ಗೌಡ

|

Updated on: Jun 19, 2024 | 10:31 PM

ಡಿಎನ್​ಎ ಟೆಸ್ಟ್​ ಸಲುವಾಗಿ ಇಂದು (ಜೂನ್​ 19) ಪವಿತ್ರಾ ಗೌಡ ಸೇರಿದಂತೆ 9 ಆರೋಪಿಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಯಿತು. ಈ ವೇಳೆ ಪೊಲೀಸ್​ ವ್ಯಾನ್​ನಲ್ಲಿ ಕುಳಿತಿದ್ದ ನಟಿ ಪವಿತ್ರಾ ಗೌಡ ಸಖತ್​ ಆತಂಕದಲ್ಲಿ ಇದ್ದಂತೆ ಕಾಣಿಸಿತು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಚುರುಕುಕೊಂಡಿದೆ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು ಮತ್ತು ಮೃತನ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಅವರು ಪೊಲೀಸ್​ ಕಸ್ಟಡಿಯಲ್ಲಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಹತ್ಯೆ ಕೇಸ್​ನಲ್ಲಿ ಅವರು ಎ1 ಆಗಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿಯು ಪವಿತ್ರಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆ ಕಾರಣಕ್ಕಾಗಿಯೇ ಆತನನ್ನು ಬೆಂಗಳೂರಿಗೆ ಕರೆತಂದು ಕೊಲೆ ಮಾಡಲಾಯಿತು ಎಂಬ ಆರೋಪ ಇದೆ. ಕೊಲೆ ನಡೆದ ಸ್ಥಳದಲ್ಲಿ ಅನೇಕ ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ಆರೋಪಿಗಳ ಡಿಎನ್​ಎ ಟೆಸ್ಟ್ (DNA Test)​ ಮಾಡಿಸಲಾಗಿದೆ. ಘಟನೆಯ ಸ್ಥಳದಲ್ಲಿ ಸಿಕ್ಕ ಕೂದಲು, ರಕ್ತಕ್ಕೆ ಆರೋಪಿಗಳ ಸ್ಯಾಂಪಲ್ಸ್​ ಮ್ಯಾಚ್​ ಆಗಲಿದೆಯಾ ಎಂದು ಪರೀಕ್ಷೆ ಮಾಡಲಾಗುತ್ತಿದೆ. ಡಿಎನ್​ಎ ಪರೀಕ್ಷೆ ಸಲುವಾಗಿ ಪವಿತ್ರಾ ಗೌಡ ಸೇರಿ 9 ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ ಪೊಲೀಸ್​ ವ್ಯಾನ್​ನಲ್ಲಿ ಕುಳಿತ ಪವಿತ್ರಾ ಗೌಡ ಸಿಕ್ಕಾಪಟ್ಟೆ ಆತಂಕದಲ್ಲಿ ಇದ್ದಂತೆ ಕಾಣಿಸಿತು. ಪೊಲೀಸ್​ ಕಸ್ಟಡಿ ಸದ್ಯದಲ್ಲೇ ಕೊನೆಗೊಳ್ಳಲಿದೆ. ಆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ. ಒಂದು ವೇಳೆ ಆ ರೀತಿ ಆದರೆ ಜೈಲಿನಲ್ಲಿ ಪವಿತ್ರಾ ಗೌಡ ಕಾಲ ಕಳೆಯಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on