AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ರಾಜಾತಿಥ್ಯ ಪೋಟೋ ಹೊರಬಿದ್ದ 3 ದಿನ ನಂತರ ಪೊಲೀಸ್ ಆಯುಕ್ತ ದಯಾನಂದ ಜೈಲಿಗೆ ಭೇಟಿ

ದರ್ಶನ್ ರಾಜಾತಿಥ್ಯ ಪೋಟೋ ಹೊರಬಿದ್ದ 3 ದಿನ ನಂತರ ಪೊಲೀಸ್ ಆಯುಕ್ತ ದಯಾನಂದ ಜೈಲಿಗೆ ಭೇಟಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2024 | 6:02 PM

Share

ದರ್ಶನ್​ಗೆ ಜೈಲಲ್ಲಿ ಸಿಗುತ್ತಿರುವ ರಾಜಾತಿಥ್ಯ ಹಿನ್ನೆಲೆಯಲ್ಲಿ ಸರ್ಕಾರ ಒಂಭತ್ತು ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದೆ ಮತ್ತು ಚಿತ್ರನಟನನ್ನು ಬೇರೆ ಜೈಲಿಗೆ ಕಳಿಸುವ ತಯಾರಿ ನಡೆಸಿದೆ. ಆದರೆ, ಸಿಎಂ ಅಗಲೀ ಗೃಹ ಸಚಿವರಾಗಲೀ ದರ್ಶನ್ ಶಿಫ್ಟ್ ಮಾಡುವುದನ್ನು ಖಚಿತವಾಗಿ ಹೇಳುತ್ತಿಲ್ಲ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಚಿತ್ರನಟ ದರ್ಶನ್ ಗೆ ಜೈಲಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿರುವ ಫೋಟೋ ಬೆಳಕಿಗೆ ಮೂರು ದಿನಗಳ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಇಂದು ಆನೇಕಲ್​ನಲ್ಲಿರುವ ಸೆಂಟ್ರಲ್ ಜೈಲಿಗೆ ಭೇಟಿ ನೀಡಿದರು. ಈಗಾಗಲೇ ವರದಿಯಾಗಿರುವಂತೆ ಗೃಹಸಚಿವ ಜಿ ಪರಮೇಶ್ವರ್ ಫೋಟೋ ಸಾರ್ವಜನಿಕಗೊಂಡ ಮರುದಿನ ಜೈಲಿಗೆ ಭೇಟಿ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Darshan Arrest: ದರ್ಶನ್ ಬಂಧನ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಹೇಳಿದ್ದೇನು? ವಿಡಿಯೋ ನೋಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More