ಪ್ರಕಾಶ್ ರಾಜ್​​​ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

Edited By:

Updated on: Aug 30, 2026 | 8:33 PM

ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ಕಾರ್ಯಕ್ರಮದಲ್ಲಿ ಭಾಗಯಾಗಲು ಧಾರವಾಡಕ್ಕೆ ಆಗಮಿಸಿದ್ದ ನಟ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೂ ನುಗ್ಗಲು ಪ್ರಯತ್ನಿಸಿದ್ದಾರೆ. ಇದರಿಂದ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆಯೇ ಪೊಲೀಸರು, ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಧಾರವಾಡ, (ಆಗಸ್ಟ್ 30): ಮನುಷ್ಯತ್ವದೆಡೆಗೆ ಸಮುದಾಯ ಜಾಥಾ ಕಾರ್ಯಕ್ರಮದಲ್ಲಿ ಭಾಗಯಾಗಲು ಧಾರವಾಡಕ್ಕೆ ಆಗಮಿಸಿದ್ದ ನಟ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಎಬಿವಿಪಿ, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ್ದಾರೆ. ಆದ್ರೆ, ಪೊಲೀಸರು ತಡೆದಿದ್ದಾರೆ. ಬಳಿಕ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೂ ನುಗ್ಗಲು ಪ್ರಯತ್ನಿಸಿದ್ದಾರೆ. ಇದರಿಂದ ಪರಿಸ್ಥಿತಿ ಬಿಗುಡಾಯಿಸುತ್ತಿದ್ದಂತೆಯೇ ಪೊಲೀಸರು, ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

ಕಾರ್ಯಕರ್ತರನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಶಹರ ಠಾಣೆಗೆ ಆಗಮಿಸಿ ಪೊಲೀಸರನ್ನು ತರಾಟೆ ತೆಗೆದುಕೊಂಡರು. ಆರ್ ಎಸ್ ಎಸ್ ಧಿಕ್ಕಾರ ಎಂದವರನ್ನೇಕೆ ಬಂಧಿಸಿಲ್ಲ. ಬಿಜೆಪಿ, ಎಬಿವಿಪಿಯವರನ್ನು ಮಾತ್ರ ಬಂಧಿಸಿದ್ದಾರೆ. ಕಾರ್ಯಕ್ರಮ ಆಯೋಜಕರು ನಮ್ಮ ಬಗ್ಗೆ ಮಾತನಾಡಿದ್ದಾರೆ. ಅವರ ಪೈಕಿ ಒಬ್ಬರನ್ನೂ ಬಂಧಿಸಿಲ್ಲ. ಅವರನ್ನೂ ಬಂಧಿಸಬೇಕಲ್ಲವೇ? ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

Loading...
Unable to load recommendations.
Follow Us