ಹದಿಮೂರು ವರ್ಷದ ಬಾಲಕನನ್ನು ಹತೈಗಿದ್ದಿದ್ದು ಅಕ್ಷಮ್ಯ, ಗುಂಡೇಟು ತಿಂದು ಆಸ್ಪತ್ರೆ ಸೇರಿದ ಆರೋಪಿಗಳು

ಅರುಣ್​ ಕುಮಾರ್​ ಬೆಳ್ಳಿ

Updated on: Aug 01, 2025 | 10:57 AM

ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್ ಗೆ ಅಂತ ತೆರಳಿದ್ದ ಬಾಲಕ ನಿಶ್ಚಿತ್​ನ ಅಪಹರಣವಾಗಿತ್ತು. ಅರೋಪಿಗಳು ನಿಶ್ಚಿತ್ ಪೋಷಕರಿಗೆ ₹5 ಲಕ್ಷಗಳ ರ‍್ಯಾನ್ಸಮ್​ಗಾಗಿ ಬೇಡಿಕೆ ಇಟ್ಟಿದ್ದರು. ಪೋಷಕರು ಪೊಲೀಸರಿಗೆ ದೂರು ಸಲ್ಲಿಸಿದ ಕಾರಣ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಬಾಲಕನನ್ನು ಕೊಂದಿದ್ದು ನಿಶ್ಚಿತ್ ಶವ ನಿನ್ನೆ ಬನ್ನೇರುಘಟ್ಟದ ಅರಣ್ಯಪ್ರದೇಶದಲ್ಲಿ ಪತ್ತೆಯಾಗಿತ್ತ್ತು.

ಬೆಂಗಳೂರು, ಆಗಸ್ಟ್ 1: ಹದಿಮೂರು ವರ್ಷದ ಬಾಲಕನನ್ನು ಗುರುಮೂರ್ತಿ (Gurumurthy) ಮತ್ತು ಗೋಪಾಲಕೃಷ್ಣ (Gopalakrishna) ಹೆಸರಿನ ದುಷ್ಟರು ಅಪಹರಿಸಿ, ಕೊಂದು, ಬನ್ನೇರುಘಟ್ಟದ ಪೊಲೀಸರು ಬೆನ್ನಟ್ಟಿದ್ದಾಗ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದು, ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು ಮತ್ತು ಅವರು ಕಾಲಿಗೆ ಗುಂಡು ಹಾರಿಸಿದಾಗ ಪೆಟ್ಟು ತಿಂದು ತೀವ್ರವಾಗಿ ಗಾಯಗೊಂಡಿದ್ದು ಇದೇ ಜಾಗ. ಆರೋಪಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಸ್ಥಳದಲ್ಲಿ ದುಷ್ಟರು ಬಳಸಿದ ದ್ವಿಚಕ್ರವಾಹನ ಮತ್ತು ಹರಿತವಾದ ಆಯುಧಗಳನ್ನು ನೋಡಬಹುದು. ಆರೋಪಿಗಳು ಹಲ್ಲೆಗೆ ಮುಂದಾಗಿದ್ದ ಕಾರಣ ಆತ್ಮರಕ್ಷಣೆಗಾಗಿ ಹುಳಿಮಾವು ಪೊಲೀಸ್ ಠಾಣೆಯ ಪಿಎಸ್​ಐ ಕುಮಾರಸ್ವಾಮಿ ಮತ್ತು ಎಸ್ಐ ಅರವಿಂದ್ ಕುಮಾರ್ ಗುಂಡು ಹಾರಿಸಿದರೆಂದು ನಮ್ಮ ವರದಿಗಾರ ಹೇಳುತ್ತಾರೆ.

ಇದನ್ನೂ ಓದಿ:  ಮೈಸೂರಿನಲ್ಲಿ ಶೂಟೌಟ್: ಕೇರಳ ಉದ್ಯಮಿಯ ದರೋಡೆ ಮಾಡಿದ್ದ ಆರೋಪಿ ಕಾಲಿಗೆ ಗುಂಡೇಟು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.