‘ಕಾಮಿಡಿ ಕಿಲಾಡಿಗಳು’ ನಟ ಚಂದ್ರಶೇಖರ್ ಸಿದ್ದಿ ಸಾವಿಗೆ ಕಾರಣ ಏನು? ವಿವರ ನೀಡಿದ ಪೊಲೀಸ್

Updated on: Aug 03, 2025 | 10:10 AM

ನಟ ಚಂದ್ರಶೇಖರ್ ಸಿದ್ದಿ ಅವರು ‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಅವರು ಆತ್ಮಹತ್ಯೆ ಮಾಡಿಕೊಂಡ ಶಾಕಿಂಗ್ ಸುದ್ದಿ ಕೇಳಿಬಂತು. ಅವರ ಸಾವಿನ ಕಾರಣ ಏನು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ನಟ ಚಂದ್ರಶೇಖರ್ ಸಿದ್ದಿ ಅವರು ‘ಕಾಮಿಡಿ ಕಿಲಾಡಿಗಳು’ (Comedy Khiladigalu) ಶೋ ಮೂಲಕ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಅವರು ಆತ್ಮಹತ್ಯೆ ಮಾಡಿಕೊಂಡ ಶಾಕಿಂಗ್ ಸುದ್ದಿ ಕೇಳಿಬಂತು. ಅವರ ಸಾವಿನ ಕಾರಣ ಏನು ಎಂಬ ಪ್ರಶ್ನೆ ಎಲ್ಲರ ಮನದಲ್ಲೂ ಇದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಚಂದ್ರಶೇಖರ್ ಸಿದ್ದಿ (Chandrashekhar Siddi) ತಾಯಿ ದೂರು ನೀಡಿದ್ದಾರೆ. ‘ನಿಖರ ಕಾರಣವನ್ನು ಇನ್ನೂ ತಿಳಿಯಬೇಕಿದೆ. 2-3 ತಿಂಗಳ ಹಿಂದೆ ಗಂಡ-ಹೆಂಡತಿ ನಡುವೆ ಜಗಳ ಆಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅವಕಾಶಗಳು ಸಿಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುದರ ಬಗ್ಗೆ ಇನ್ನೂ ವಿಚಾರಣೆ ಮಾಡಬೇಕಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More