‘ದರ್ಶನ್ ಕೇಸಲ್ಲಿ ನೀನು ತಲೆ ತೂರಿಸಬೇಡ’: ಧನ್ವೀರ್ ಗೌಡಗೆ ಪೊಲೀಸ್ ವಾರ್ನಿಂಗ್

Updated on: Aug 17, 2025 | 12:07 PM

ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ನಟ ಧನ್ವೀರ್ ಗೌಡ ಆಪ್ತವಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಕೇಸ್​​ನಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ದರ್ಶನ್​​ಗೆ ಧನ್ವೀರ್ ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಅವರನ್ನು ಬಂಧಿಸಲು ಬಂದ ಪೊಲೀಸರ ಜೊತೆ ಮಾತನಾಡಲು ಧನ್ವೀರ್ ಗೌಡ ಮುಂದಾಗಿದ್ದರು.

ನಟ ದರ್ಶನ್ (Darshan) ಜೊತೆ ಧನ್ವೀರ್ ಗೌಡ ಆಪ್ತವಾಗಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ದರ್ಶನ್​​ಗೆ ಅವರು ಸಾಕಷ್ಟು ಸಹಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ದರ್ಶನ್ ಅವರನ್ನು ಪೊಲೀಸರು ಬಂಧಿಸಲು ಬಂದಾಗ ಧನ್ವೀರ್ ಗೌಡ (Dhanveer Gowda) ಮಾತನಾಡಲು ಮುಂದಾಗಿದ್ದರು. ಆಗ ಪೊಲೀಸರು ಖಡಕ್ ವಾರ್ನಿಂಗ್ ನೀಡಿದರು. ‘ನೀನು ದರ್ಶನ್ ಪ್ರಕರಣದಲ್ಲಿ ಹೆಚ್ಚು ತಲೆ ತೂರಿಸಬೇಡ. ಕಾನೂನು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ಪೊಲೀಸರು ವಾರ್ನಿಂಗ್ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More