Selfi Huchhata: ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ; ಖಡಕ್ ವಾರ್ನಿಂಗ್ ಕೊಟ್ಟ ಪೊಲೀಸ್ ಇನ್ಸ್​ಪೆಕ್ಟರ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 25, 2023 | 2:59 PM

ಉಡುಪಿ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ ಹಿನ್ನೆಲೆ ಪೊಲೀಸ್ ಇನ್ಸ್​ಪೆಕ್ಟರ್ ಹರೀಶ್ ಆರ್ ನಾಯ್ಕ್ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಉಡುಪಿ, ಜು.25: ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹುಚ್ಚಾಟ ಹಿನ್ನೆಲೆ ಪೊಲೀಸ್ ಇನ್ಸ್​ಪೆಕ್ಟರ್ ಹರೀಶ್ ಆರ್ ನಾಯ್ಕ್ ಕ್ಲಾಸ್​ ತೆಗೆದುಕೊಂಡಿದ್ದಾರೆ. ಉಡುಪಿ(Udupi)ಯ ತ್ರಾಸಿ-ಮರವಂತೆ ಬೀಚ್ ಬಳಿ ಮೈಮರೆತು ಸೆಲ್ಪಿ ಹುಚ್ಚಾಟವಾಡುತ್ತಿದ್ದವರಿಗೆ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ. ಪ್ರವಾಸಿಗರು ಬೀಚ್​ಗೆ ಇಳಿಯದಂತೆ ರಿಬ್ಬನ್ ಹಾಗೂ ಸೂಚನಾ ಫಲಕ ಅಳವಡಿಕೆ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಮರವಂತೆ ಬೀಚ್ ಬಳಿ ಕೆಲ‌ದಿನಗಳ ಹಿಂದೆ ಸೆಲ್ಪಿ ತೆಗೆಯುತ್ತಿದ್ದ ಯುವಕ ಸಮುದ್ರ ಪಾಲಾಗಿದ್ದ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us on