ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?

Updated on: Jun 16, 2024 | 5:02 PM

ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಿಸಿ ತಂದಿದ್ದ ಟೊಯೊಟಾ ಇಟಿಯಾಸ್ ಕಾರನ್ನು ಪೊಲೀಸರು ತಪಾಸಣೆ ನಡೆಸಿದರು. ಕಾರು ಚಾಲಕ ರವಿ ಮನೆಯಲ್ಲಿ ಮಹಜರು ಸಹ ಮಾಡಲಾಗಿದೆ.

ರೇಣುಕಾ ಸ್ವಾಮಿ (Renuka Swamy) ಪ್ರಕರಣದ ಆಳಕ್ಕೆ ತಲುಪುವ ಪೂರ್ಣ ಉಮೇದಿನಿಂದಲೇ ಚುರುಕಾಗಿ ತನಿಖೆ ಮಾಡುತ್ತಿದ್ದಾರೆ ಕಾಮಾಕ್ಷಿಪಾಳ್ಯ ಪೊಲೀಸರು. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದ ಟೊಯೊಟಾ ಇಟಿಯಾಸ್ ಕಾರನ್ನು ಪೊಲೀಸರು ತಪಾಸಣೆ ಮಾಡಿ, ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಿನ ಚಾಲಕ ರವಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಬಾಡಿಗೆಗೆ ಕರೆದರು ಎಂಬ ಕಾರಣಕ್ಕೆ ಹೋಗಿದ್ದ ರವಿ ಈಗ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾನೆ. ಆತನ ಕುಟುಂಬದವರು, ಗೆಳೆಯರಿಗೆ ಇದು ನಂಬಲಾಗುತ್ತಿಲ್ಲ. ತಮ್ಮ ರವಿಗೆ ಈ ಸ್ಥಿತಿ ಬಂದಿದ್ದಕ್ಕೆ ಅವರು ನಟ ದರ್ಶನ್​ಗೆ ಹಿಡಿ ಶಾಪ ಹಾಕಿದ್ದಾರೆ. ರೇಣುಕಾ ಸ್ವಾಮಿಯಂತೆ ದರ್ಶನ್ ಸಹ ಸಾಯಲಿ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More