ಚಪ್ಪಲಿ-ಕಲ್ಲು ತೂರಾಟ: ಪಂಚಮಸಾಲಿ ಹೋರಾಟದಿಂದ ಬೆಳಗಾವಿ ಕೊತ-ಕೊತ!
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಬೆಳಗಾವಿ, (ಡಿಸೆಂಬರ್ 10): ಬೆಳಗಾವಿಯ ಸುವರ್ಣಸೌಧದ ಮುಂಭಾಗ ನಡೆಯುತ್ತಿದ್ದ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. 2ಎ ಮೀಸಲಾತಿ ನೀಡಲೇಬೇಕೆಂದು ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದರಿಂದ ಪೊಲೀಸರು ಹಾಗೂ ಪ್ರತಿಭಟನೆಕಾರರ ನಡುವೆ ವಾಗ್ದಾದ ನಡೆದಿದ್ದು, ಅದು ವಿಕೋಪಕ್ಕೆ ತಿರುಗಿದೆ ಬಳಿಕ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಬಳಿಕ ಆಕ್ರೋಶಗೊಂಡ ಹೋರಾಟಗಾರರು ಸಹ ಪೊಲೀಸರ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
Published on: Dec 10, 2024 04:26 PM
Follow Us
Latest Videos
ಇಂದು ಫ್ರೀಡಂಪಾರ್ಕ್ನಲ್ಲಿ ಜೆಡಿಎಸ್ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!

