ಬಾದಾಮಿಯಲ್ಲಿ ಕಾಲಿಗೆ ಬಿದ್ದ ಪೊಲೀಸ್ ಸಿಬ್ಬಂದಿ ನಮ್ಮ ಮಠದ ಭಕ್ತರು: ಸಿದ್ದನಕೊಳ್ಳ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2025 | 8:00 PM

ಸುಮಾರು ಎರಡು ವಾರಗಳ ಹಿಂದೆ ಬಾದಾಮಿಯ ಬನಶಂಕರಿ ದೇವಸ್ಥಾನದ ಬಳಿ ಸ್ವಾಮೀಜಿಯವರು ಕಾರಲ್ಲಿ ಹೋಗುತ್ತಿದ್ದಾಗ ಒಂದಷ್ಟು ಪೊಲೀಸ್ ಸಿಬ್ಬಂದಿ ಧಾವಿಸಿಬಂದು ಇವರ ಕಾಲಿಗೆ ಬಿದ್ದಿದ್ದಾರೆ. ಮಠದ ಭಕ್ತರಾಗಿರುವ ಅವರು ಹಾಗೆ ಮಾಡುವಾಗ ತಲೆಮೇಲಿಮ ಹ್ಯಾಟ್ ತೆಗೆದಿದ್ದರು ಮತ್ತು ಆಶಿರ್ವಾದದ ರೂಪದಲ್ಲಿ ಹಣ ನೀಡುವುದು ತಮ್ಮ ಮಠದ ಸಂಪ್ರದಾಯ ಎಂದು ಸ್ವಾಮೀಜಿ ಹೇಳುತ್ತಾರೆ.

ಬಾಗಲಕೋಟೆ, ಮಾರ್ಚ್ 14: ಪೊಲೀಸ್ ಸಮವಸ್ತ್ರ (police uniform) ಧರಿಸಿಯೇ ಬಾಗಲಕೋಟೆಯ ಸಿದ್ದನಕೊಳ್ಳ ಶಿವಕುಮಾರ್ ಸ್ವಾಮೀಜಿಯವರ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದದ ರೂಪದಲ್ಲಿ ಅವರಿಂದ ಹಣ ಪಡೆದ ಪ್ರಕರಣದ ವಿಡಿಯೋ ರಾಜ್ಯದಾದ್ಯಂತ ಚರ್ಚೆಯಾಗುತ್ತಿದೆ. ನಮ್ಮ ಬಾಗಲಕೋಟೆಯ ವರದಿಗಾರ ಶಿವಕುಮಾರ್ ಸ್ವಾಮೀಜಿ ಅವರೊಂದಿಗೆ ಮಾತಾಡಿ ಅಸಲಿಗೆ ಅವತ್ತು ನಡೆದಿದ್ದೇನು ಅಂತ ಕೇಳಿದ್ದಾರೆ. ನಮ್ಮ ವರದಿಗಾರ ಕೇಳಿದ ಎಲ್ಲ ಪ್ರಶ್ನೆಗಳಿಗೆ ಸ್ವಾಮೀಜಿ ಉತ್ತರ ನೀಡಿದ್ದಾರೆ. ಕಾಲಿಗೆ ಬಿದ್ದ ಪೊಲೀಸ್ ಸಿಬ್ಬಂದಿಯನ್ನು ಶಿಸ್ತು ಕ್ರಮವಾಗಿ ಟ್ರಾನ್ಸ್​ಫರ್ ಮಾಡಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪಾಕಟಾಕ್ಷ: ಪ್ರಭಾವಿ ಸ್ವಾಮೀಜಿ ಶಾಮೀಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.