Karnataka Assembly Polls: ಬಾಗಲಕೋಟೆಯ ಹಿರೇಬಾಗೇವಾಡಿ ಟೋಲ್ ಬಳಿ ದಾಖಲೆರಹಿತ ರೂ. 2 ಕೋಟಿ ಪೊಲೀಸ್ ವಶಕ್ಕೆ, ಖಾಸಗಿ ಬಸ್ಸಲ್ಲಿ ಹಣ ಪತ್ತೆ

Updated on: Apr 05, 2023 | 10:18 AM

ರಾಜ್ಯದ ನಾನಾ ಭಾಗಗಳಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಆಭರಣ ಮತ್ತು ಇತರ ವಸ್ತುಗಳು ಬರಾಮತ್ತಾಗುತ್ತಿರುವುದು ನಿಜವಾದರೂ ಅವುಗಳ ವಾರಸುದಾರರು ಯಾರೆನ್ನುವುದು ಗೊತ್ತಾಗುತ್ತಿಲ್ಲ.

ಬಾಗಲಕೋಟೆ: ಜಿಲ್ಲೆಯ ಹಿರೇಬಾಗೇವಾಡಿ (Hirebagewadi) ಟೋಲ್ ಬಳಿ ಖಾಸಗಿ ಬಸ್ಸೊಂದರಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ 2 ಕೋಟಿ ರೂ. ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ಸಿನ ತಪಾಸಣೆ ನಡೆಸುತ್ತಿದ್ದಾಗ ಪೊಲೀಸರಿಗೆ ಹಣದ ಥೈಲಿ (money bag) ಸಿಕ್ಕಿದೆ. ಹಣ ವಶಪಡಿಸಿಕೊಂಡ ಬಳಿಕ ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ (IT department officials) ಮಾಹಿತಿ ನೀಡಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಆಭರಣ ಮತ್ತು ಇತರ ವಸ್ತುಗಳು ಪೊಲೀಸ್ ಇಲ್ಲವೇ ಚುನಾವಣಾಧಿಕಾರಿಗಳ ದಾಳಿಯಲ್ಲಿ ಬರಾಮತ್ತಾಗುತ್ತಿರುವುದು ನಿಜವಾದರೂ ಅವುಗಳ ವಾರಸುದಾರರು ಯಾರೆನ್ನುವುದು ಗೊತ್ತಾಗುತ್ತಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More