ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇಯನ್ನು ಉದ್ಘಾಟಿಸಲು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಗೆ ಆಗಮಿಸಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ವೇದಿಕೆ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ ಮಾಡಲಾಗಿದೆ. ಹಾಗೆಯೇ ಕಾರ್ಯಕ್ರಮಕ್ಕೆ ಆಗಮಿಸುವ ಜನರನ್ನು ಪರಿಶೀಲಿಸಲಾಗುತ್ತಿದೆ. ಈ ವೇಳೆ ತಾಯಿಯೊಬ್ಬರು ಬಾಲಕನನ್ನು ಕರೆದುಕೊಂಡು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ತಪಾಸಣೆ ವೇಳೆ ಮಗುವಿನ ಬಟ್ಟೆ ಬಿಚ್ಚಿಸಿದ್ದಾರೆ. ಬಾಲಕ ಕಪ್ಪು ಟಿಶರ್ಟ್ ಧರಿಸಿದ ಹಿನ್ನೆಲೆ ಬಟ್ಟೆ ಬಿಚ್ಚಲಾಗಿದೆ.