Karnataka Bandh: ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕುವ ಎಚ್ಚರಿಕೆ; ಮುಖ್ಯಮಂತ್ರಿ ನಿವಾಸದ ಸುತ್ತ ಹೆಚ್ಚುವರಿ ಪೊಲೀಸ್ ನಿಯೋಜನೆ
ಮುಖ್ಯಮಂತ್ರಿಗಳ ನಿವಾಸದ ಕಡೆ ಹೋಗುವ ಎಲ್ಲ ರಸ್ತೆಗಗನ್ನು ಬ್ಯಾರಿಕೇಡ್ ಗಳಿಂದ ಬಂದ್ ಮಾಡಿ ಪೊಲೀಸ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ರಾಜ್ಯದ ನಿವೃತ್ತ ನ್ಯಾಯಾಧೀಶರೊಂದಿಗೆ ಸಿದ್ದರಾಮಯ್ಯ ಇಂದು ಸಾಯಂಕಾಲ ಸಭೆಯೊಂದನ್ನು ನಡೆಸಲಿದ್ದಾರೆ.
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಸಿದಂತೆ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಸರ್ಕಾರ (Karnataka government) ರಾಜ್ಯದ ಜನತೆಯ ಹಿತರಕ್ಷಣೆ ಕಾಪಾಡುವಲ್ಲಿ ವಿಫಲವಾಗಿದೆ ಅಂತ ಕನ್ನಡ ಪರ ಮತ್ತು ಇತರ ಅನೇಕ ಸಂಘಟನೆಗಳು ಇಂದು ಕರ್ನಾಟಕ ಬಂದ್ ಆಚರಿಸುತ್ತಿವೆ (Karnataka Bandh). ಪ್ರತಿಭಟನೆಯ ಭಾಗವಾಗಿ ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ನಿವಾಸ ಕೃಷ್ಣಾಗೆ ಮುತ್ತಿಗೆ ಹಾಕುವುದಾಗಿಯೂ ಪ್ರತಿಭಟನೆಕಾರು ಗುರುವಾರ ಹೇಳಿದ್ದರು. ಹಾಗಾಗೇ, ಸಿಎಂ ನಿವಾಸದ ಸುತ್ತ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಅಸಂಖ್ಯಾತ ಪೊಲೀಸರು ವಾಹನಗಳೊಂದಿಗೆ ಕಾವಲು ನಿಂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮುಖ್ಯಮಂತ್ರಿಗಳ ನಿವಾಸದ ಕಡೆ ಹೋಗುವ ಎಲ್ಲ ರಸ್ತೆಗಗನ್ನು ಬ್ಯಾರಿಕೇಡ್ ಗಳಿಂದ ಬಂದ್ ಮಾಡಿ ಪೊಲೀಸ್ ತುಕುಡಿಗಳನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ವಿವಾದಕ್ಕೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳಲು ರಾಜ್ಯದ ನಿವೃತ್ತ ನ್ಯಾಯಾಧೀಶರೊಂದಿಗೆ ಸಿದ್ದರಾಮಯ್ಯ ಇಂದು ಸಾಯಂಕಾಲ ಸಭೆಯೊಂದನ್ನು ನಡೆಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

