ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಜಲಪಾತದ ಬಳಿ ಚೆಲ್ಲಾಟವಾಡುತ್ತಿದ್ದ ಯುವಕರ ಬಟ್ಟೆ ಎತ್ಹಾಕಿಕೊಂಡು ಬಂದ ಪೊಲೀಸರು!

ಮಳೆಗಾಲದಲ್ಲಿ ಜಲಪಾತಗಳ ಕೆಳಗೆ ಆಟವಾಡೋದು ಅಪಾಯಕ್ಕೆ ಆಹ್ವಾನವಿತ್ತಂತೆ. ಇದನ್ನು ಅರ್ಥಮಾಡಿಕೊಳ್ಳಲು ರಾಕೆಟ್ ಸೈನ್ಸ್ ಓದುವ ಅವಶ್ಯಕತೆಯಿಲ್ಲ. ಜಾರುವ ಬಂಡೆಗಳ ಮೇಲೆ ನೀರು ಸಹ ಬೀಳುವುದರಿಂದ ಅವರು ಮತ್ತಷ್ಟು ಅಪಾಯಕಾರಿಯಾಗುತ್ತವೆ. ಪೊಲೀಸರು ಯುವಕರ ಒಳ್ಳೆಯದಕ್ಕಾಗಿ ಬುದ್ಧಿ ಹೇಳುತ್ತಾರೆಯೇ ಹೊರತು ಅವರಿಗೆ ಅದರಿಂದ ಅವರಿಗೇನೂ ಲಾಭವಿಲ್ಲ.

ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಜಲಪಾತದ ಬಳಿ ಚೆಲ್ಲಾಟವಾಡುತ್ತಿದ್ದ ಯುವಕರ ಬಟ್ಟೆ ಎತ್ಹಾಕಿಕೊಂಡು ಬಂದ ಪೊಲೀಸರು!
|

Updated on: Jul 10, 2024 | 10:24 AM

ಚಿಕ್ಕಮಗಳೂರು: ಈ ಮೂರ್ಖರಿಗೆ ಇಷ್ಟು ಶಿಕ್ಷೆ ಸಾಲದು. ಮಳೆ ಸುರಿದಾಗಲೆಲ್ಲ ಚಾರ್ಮಾಡಿ ಗುಡ್ಡ ಪ್ರದೇಶದಲ್ಲಿ ಕೃತಕ ಜಲಪಾತಗಳು ಸೃಷ್ಟಿಯಾಗುತ್ತವೆ. ಅವು ನೋಡಲಷ್ಟೇ ಚಂದ ಮತ್ತು ದೂರದಿಂದ ಸೆಲ್ಫೀಗಳನ್ನು ತೆಗೆದುಕೊಂಡರೂ ಅಡ್ಡಿಯಿಲ್ಲ. ಆದರೆ ಪ್ರವಾಸಕ್ಕೆ ಬಂದಿರುವ ಯುವ ಮೂರ್ಖರು ಮೇಲಿಂದ ಕೆಳಗೆ ಸುರಿಯುತ್ತಿರುವ ನೀರಿನ ಬಳಿ ಹೋಗಿ ಜಾರುವ ಬಂಡೆಗಳ ಮೇಲೆ ನಿಂತು ಚೆಲ್ಲಾಟವಾಡುತ್ತಿದ್ದರು. ಅದನ್ನು ಗಮನಿಸಿದ ಪೊಲೀಸರು ಅವರ ಬಟ್ಟೆಗಳನ್ನು ಎತ್ತಿಕೊಂಡು ರಸ್ತೆಗೆ ಬಂದಿದ್ದಾರೆ. ಅಯ್ಯೋ ಬಟ್ಟೆ ಹೋಯ್ತಲ್ಲ ಅಂತ ಯುವಕರು ಪೊಲೀಸರ ಬಳಿ ಓಡಿ ಬಂದಿದ್ದಾರೆ. ಹಾಗೆ ಬಂದವರು ತಪ್ಪಾಯ್ತು ಸರ್, ಇನ್ಮುಂದೆ ಹಾಗೆ ಮಾಡಲ್ಲ ಅಂತ ಗೋಗರೆದು ಬಟ್ಟೆ ವಾಪಸ್ಸು ಪಡೆಯುವ ಬದಲು ಅವರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಪೊಲೀಸರೇನೋ ಬುದ್ಧಿವಾದ ಹೇಳಿ ಬಟ್ಟೆ ಮರಳಿಸಿದ್ದಾರೆ, ಅದರೆ ನಾಯಿ ಬಾಲ ಯಾವತ್ತಿಗೂ ಡೊಂಕೇ ಎನ್ನುವ ಮಾತಿಗೆ ಸಾಕ್ಷಿಯಾಗಿರುವ ಯುವಕರಿಗೆ ಬುದ್ಧಿಯಂತೂ ಬಂದಿರಲಾರದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ದೈವ ನುಡಿದಂತೆ ಗುಳಿಗ ದೇವರ ಮೂಲ ವಿಗ್ರಹ ಪತ್ತೆ; ಚಾರ್ಮಾಡಿ ಘಾಟಿ ಪ್ರಯಾಣಿಕರನ್ನ ರಕ್ಷಿಸ್ತಿರೋ‌ ದೈವದ ಬಗ್ಗೆ ಹೆಚ್ಚಾಯ್ತು ನಂಬಿಕೆ

Follow us
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?