ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​; ಎನ್​ಐಎ ತಂಡದಿಂದ ಸ್ಥಳ ಮಹಜರು

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್​ಐಎ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಯುತ್ತಿದೆ. ಆರೋಪಿ ಮುಸಾವಿರ್​ನನ್ನು ಕರೆತಂದು ಎನ್​ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಭದ್ರತೆಗಾಗಿ ಸ್ಥಳೀಯವಾಗಿ ವೈಟ್ ಫೀಲ್ಡ್ ವಿಭಾಗದ 50ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​; ಎನ್​ಐಎ ತಂಡದಿಂದ ಸ್ಥಳ ಮಹಜರು
| Updated By: ಆಯೇಷಾ ಬಾನು

Updated on:Aug 05, 2024 | 9:49 AM

ಬೆಂಗಳೂರು, ಆಗಸ್ಟ್.05: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಮೇಶ್ವರಂ ಕೆಫೆಯಲ್ಲಿ ಎನ್​ಐಎ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಯುತ್ತಿದೆ. ಆರೋಪಿ ಮುಸಾವಿರ್​ನನ್ನು ಕರೆತಂದು ಎನ್​ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸುತ್ತಿದ್ದಾರೆ. ಹೀಗಾಗಿ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸ್ಥಳೀಯವಾಗಿ ವೈಟ್ ಫೀಲ್ಡ್ ವಿಭಾಗದ 50ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಘಟನೆ ನಡೆದು ಐದು ತಿಂಗಳ ಬಳಿಕ ಆರೋಪಿ ಕರೆತಂದು ಮಹಜರು ನಡೆಸಲಾಗುತ್ತಿದೆ.

NIA ಅಧಿಕಾರಿಗಳು 2-3 ಬಾರಿ ದೃಶ್ಯ ಮರು ಸೃಷ್ಟಿ ಮಾಡ್ತಿದ್ದಾರೆ. ಆರೋಪಿ ಮುಸಾವಿರ್, 3 ಬಾರಿ ನಡೆದುಕೊಂಡು ಬಂದು ಯಾವ ರೀತಿ ಕೃತ್ಯ ಎಸಗಲಾಗಿತ್ತು ಎಂದು ತೋರಿಸಿದ್ದಾನೆ. ಕ್ಯಾಪ್, ಕನ್ನಡಕ, ಬ್ಯಾಗ್ ಹಾಕಿಕೊಂಡು ಅವತ್ತು ಹೇಗೆ ಬಂದಿದ್ದ ಅದೇ ರೀತಿ ನಡೆದುಕೊಂಡು ಬಂದು ತೋರಿಸಿ ಅಧಿಕಾರಿಗಳಿಗೆ ವಿವರಣೆ ನೀಡಿದ್ದಾನೆ. ರಾಮೇಶ್ವರಂ ಕೆಫೆಗೆ ಹೇಗೆ ಬಂದಿದ್ದ ಆ ರೀತಿ ದೃಶ್ಯ ಮರುಸೃಷ್ಟಿ ಮಾಡಲಾಗಿದೆ. ಬಾಂಬ್ ಇಟ್ಟಿದ್ದ ಸ್ಥಳ, ಕುಳಿತಿದ್ದ ಸ್ಥಳ ತೋರಿಸಿದ್ದಾನೆ. ಈ ಎಲ್ಲವನ್ನೂ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡ್ತಿದ್ದಾರೆ. ಅವತ್ತಿನ ರೀತಿ ಬ್ಲ್ಯಾಕ್ ಬ್ಯಾಗ್, ಟೋಪಿ ಹಾಕಿಸಿ ಸ್ಥಳ‌ ಮಹಜರು ಮಾಡಲಾಗುತ್ತಿದೆ.

ರಾಷ್ಟ್ರೀಯ ತನಿಖಾ ದಳ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಮಾ.1ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಏಪ್ರಿಲ್​​ 12ರಂದು ಪ್ರಮುಖ ಆರೋಪಿಗಳನ್ನು NIA ಬಂಧಿಸಿತ್ತು. ಅಬ್ದುಲ್​ ಮತೀನ್​, ಮುಸಾವಿರ್ ಹುಸೇನ್ ಬಂಧತ ಆರೋಪಿಗಳು.

ವರದಿ: ಪ್ರದೀಪ್, ಟಿವಿ9

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:54 am, Mon, 5 August 24

Follow us
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ