ಅನಂತಪುರ ಮಾರ್ಗವಾಗಿ ಹೊರಟ ದರ್ಶನ್ ಹೊತ್ತ ಪೊಲೀಸ್ ವ್ಯಾನ್ 10 ಗಂಟೆಗೆ ಬಳ್ಳಾರಿ ತಲುಪಲಿದೆ

ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2024 | 10:15 AM

ತುಮಕೂರು ಮತ್ತು ಚಿತ್ರದುರ್ಗದ ಸಾವಿರಾರು ದರ್ಶನ್ ಅಭಿಮಾನಿಗಳು ಪೊಲೀಸ್ ವ್ಯಾನ್ ರಸ್ತೆಯ ಮೂಲಕ ಹಾದು ಹೋಗುವುದನ್ನು ನೋಡಲು ಕಾಯುತ್ತಾ ನಿಂತಿದ್ದರಿಂದ ಪೊಲೀಸರು ಅನಂತಪುರ ಮಾರ್ಗದಿಂದ ತೆರಳಲು ನಿರ್ಧರಿಸಿದರು ಅಂತ ನಮ್ಮ ವರದಿಗಾರ ಹೇಳುತ್ತಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ಚಿತ್ರನಟ ದರ್ಶನ್ ರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ವರ್ಗಾಯಿಸುವ ಕೆಲಸ ಜಾರಿಯಲ್ಲಿದ್ದ್ದು ನಮ್ಮ ವರದಿಗಾರ ಹೆಚ್ಚಿನ ಮಾಹಿತಿಯನ್ನು ನೀಡುತ್ತಿದ್ದಾರೆ. ಮೊದಲು ಪ್ಲ್ಯಾನ್ ಮಾಡಿದಂತೆ ಚಿತ್ರದುರ್ಗ ಮತ್ತು ತುಮಕೂರು ಮಾರ್ಗವಾಗಿ ಅವರನ್ನು ಬಳ್ಳಾರಿಗೆ ಕರೆದೊಯ್ಯುವ ಬದಲು ಆಂಧ್ರಪ್ರದೇಶದ ಅನಂತರಪುರ ಮಾರ್ಗದಿಂದ ಕರೆದೊಯ್ಯಲಾಗುತ್ತಿದೆ. ಹತ್ತು ಗಂಟೆಯ ನಂತರ ಪೊಲೀಸ್ ವ್ಯಾನ್ ಬಳ್ಳಾರಿ ತಲುಪಲಿದೆಯಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ದರ್ಶನ್ ತೂಗುದೀಪ: ಪರಪ್ಪನ ಅಗ್ರಹಾರದಿಂದ ಮುಂಜಾನೆಯೇ ಬಳ್ಳಾರಿಗೆ ಶಿಫ್ಟ್; ಜೈಲು ತಲುಪೋದು ಎಷ್ಟು ಗಂಟೆಗೆ?  

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.