ಗಣೇಶ ವಿಸರ್ಜನೆಯಲ್ಲಿ ಕುಣಿದು ಕುಪ್ಪಳಿಸಿದ ಪೋಲೀಸರು; ಇಲ್ಲಿದೆ ವಿಡಿಯೋ

ದೊಡ್ಡಬಳ್ಳಾಪುರ ‌ಗ್ರಾಮಾಂತರ ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ, ಸೆ.22: ದೇಶದೆಲ್ಲೆಡೆ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಅದರಂತೆ ಅದ್ಧೂರಿ ಮೆರವಣಿಗೆಯೊಂದಿಗೆ ವಿಸರ್ಜನೆಯನ್ನು ಮಾಡಲಾಗುತ್ತಿದೆ. ಇದೀಗ ದೊಡ್ಡಬಳ್ಳಾಪುರ ‌ಗ್ರಾಮಾಂತರ(Doddaballapura Rural) ಪೋಲೀಸರು ಗಣೇಶನ ವಿಸರ್ಜನೆ ವೇಳೆ‌ ಠಾಣೆಯ ಮುಂದೆಯೇ ಟಪ್ಪಾಗುಚ್ಚಿ ಸ್ಟೆಪ್ ಹಾಕುವ ಮೂಲಕ ಕುಣಿದು ಕುಪ್ಪಳಿಸಿದ್ದಾರೆ. ಹೌದು, ಠಾಣೆಯಲ್ಲಿಟ್ಟಿದ್ದ ಗಣೇಶಮೂರ್ತಿ ವಿಸರ್ಜನೆ ಮಾಡುವ ವೇಳೆ ಠಾಣೆಯ ಆವರಣದಲ್ಲಿಯೇ ಪೊಲೀಸರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದ ಘಟನೆ ನಡೆದಿದ್ದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us