ಬ್ಯಾಡಗಿಯಲ್ಲಿ ಮೆಣಸಿನಕಾಯಿ ಬೆಲೆ ಕುಸಿತಕ್ಕೆ ಕಾರಣರಾದವರನ್ನು ಮೊದಲು ಪತ್ತೆ ಮಾಡಬೇಕಿದೆ: ಜಿ ಪರಮೇಶ್ವರ್

Updated on: Mar 12, 2024 | 12:09 PM

ಮೆಣಸಿನಕಾಯಿ ಬೆಲೆ ಪ್ರತಿಕ್ವಿಂಟಾಲ್ ಗೆ ರೂ. 20,000 ದಿಂದ ರೂ, 8,000 ಗಳಿಗೆ ಕುಸಿದ ಕಾರಣ ರೈತರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲೆ ಕುಸಿತಕ್ಕೆ ಕಾರಣವೇನು, ಯಾರು ಮಾಡಿದ್ದು ಅಂತ ಪತ್ತೆ ಮಾಡಿ ಅಂತ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ ಎಂದು ಗೃಹ ಸಚಿವ ಹೇಳಿದರು.

ಬೆಂಗಳೂರು: ಮೆಣಸಿನಕಾಯಿ ಬೆಲೆ ದಿಢೀರ್ ಪಾತಾಳಕ್ಕೆ ಕುಸಿದ ಹಿನ್ನೆಲೆಯಲ್ಲಿ ಬ್ಯಾಡಗಿ ವ್ಯವಸಾಯ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆಯಲ್ಲಿ (Bydagi APMC) ನಡೆದ ದೊಂಬಿ ಮತ್ತು ವಾಹನಗಳಿಗೆ ಬೆಂಕಿಯಿಟ್ಟ ಘಟನೆ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಹೇಳಿಕೆ ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮೆಣಸಿನಕಾಯಿ ಬೆಲೆ (chilly price) ಪ್ರತಿಕ್ವಿಂಟಾಲ್ ಗೆ ರೂ. 20,000 ದಿಂದ ರೂ, 8,000 ಗಳಿಗೆ ಕುಸಿದ ಕಾರಣ ರೈತರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲೆ ಕುಸಿತಕ್ಕೆ ಕಾರಣವೇನು, ಯಾರು ಮಾಡಿದ್ದು ಅಂತ ಪತ್ತೆ ಮಾಡಿ ಅಂತ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ. ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆ ಏಷ್ಯಾದ್ಲಲೇ ಅತಿ ದೊಡ್ಡದು, ಘಟನೆಯಲ್ಲಿ 6-7 ವಾಹನಗಳು ಸುಟ್ಟು ಭಸ್ಮವಾಗಿವೆ ಮತ್ತು ಒಂದು ಫೈರ್ ಎಂಜಿನ್ ಗೂ ಬೆಂಕಿ ತಗುಲಿದೆ ಎಂದು ಪರಮೇಶ್ವರ್ ಹೇಳಿದರು. ಬೆಲೆ ಕುಸಿತಕ್ಕೆ ಕಾರಣ ಯಾರು ಅನ್ನೋದು ಮೊದಲು ಪತ್ತೆಯಾಗಬೇಕಿದೆ, ಗಲಾಟೆ-ದಳ್ಳುರಿಗೆ ಸಂಬಂಧಿಸಿದಂತೆ 40-45 ಜನರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಭೀಕರ ಬರದಲ್ಲೂ ಮೆಣಸಿನಕಾಯಿ ಬೆಳೆದು ಸೈ ಎನಿಸಿಕೊಂಡ ರೈತರು; ಇಲ್ಲಿದೆ ಸಂಪೂರ್ಣ ವಿವರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More