Karnataka Assembly Polls 2023: ರಾಜ್ಯ ಚುನಾವಣಾ ರಾಜಕಾರಣದಲ್ಲಿ ರಕ್ತದ ಉಲ್ಲೇಖ, ರಕ್ತದಿಂದ ಬರೆದುಕೊಡುವ ಶಪಥ ಮಾಡುತ್ತಿರುವ ನಾಯಕರು!

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2023 | 11:21 AM

ನಮ್ಮ ನಾಯಕರು ತಮ್ಮ ರಕ್ತವನ್ನು ಹೀಗೆ ಬರೆಯಲು ಉಪಯೋಗಿಸಿ ಹಾಳು ಮಾಡುವ ಬದಲು ದಾನ ಮಾಡಿದರೆ ಅದರ ಅಗತ್ಯವಿರುವವರ ಜೀವವಾದರೂ ಉಳಿಯುತ್ತದೆ.

ಮೈಸೂರು: ರಾಜ್ಯ ಚುನಾವಣಾ ರಾಜಕಾರಣದಲ್ಲಿ ರಕ್ತದ ಉಲ್ಲೇಖ ಪದೇಪದೆ ಆಗುತ್ತಿದೆ. ಹುಬ್ಬಳ್ಳಿಯಲ್ಲಿ ಬಿಎಸ್ ಯಡಿಯೂರಪ್ಪನವರು (BS Yediyurappa) ಜಗದೀಶ್ ಶೆಟ್ಟರ್ (Jagadish Shettar) ಸೋಲುವುದು ಖಚಿತ ಅಂತ ರಕ್ತದಲ್ಲಿ ಬರೆದುಕೊಡ್ತೀನಿ ಅಂತ ಹೇಳಿದ್ದನ್ನು ನೀವು ಕೇಳಿಸಿಕೊಂಡಿರಬಹುದು. ಇಂದು ಮೈಸೂರಲ್ಲಿ ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ರಾಜ್ಯದೆಲ್ಲೆಡೆ ಬಿಜೆಪಿ ಸರ್ಕಾರ 40% ಕಮೀಶನ್ ಸರ್ಕಾರ ಅಂತ ಸಾಬೀತಾಗಿದೆ. ಹಾಗಾಗಿ, ಬಿಜೆಪಿಗೆ ಈ ಬಾರಿ 40ಕ್ಕಿಂತ ಹೆಚ್ಚು ಸೀಟು ಸಿಗಲ್ಲ, ಕಾಂಗ್ರೆಸ್ 150 ಗಳೊಂದಿಗೆ ಜಯಭೇರಿ ಬಾರಿಸಲಿದೆ ಎಂದು ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳಿದರು. ನಮ್ಮ ನಾಯಕರು ತಮ್ಮ ರಕ್ತವನ್ನು ಹೀಗೆ ಬರೆಯಲು ಉಪಯೋಗಿಸಿ ಹಾಳು ಮಾಡುವ ಬದಲು ದಾನ ಮಾಡಿದರೆ ಅದರ ಅಗತ್ಯವಿರುವವರ ಜೀವವಾದರೂ ಉಳಿಯುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.