ರಾಮನಗರ: ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಪರ ಪ್ರಚಾರ ಮಾಡುತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಡಿಕೆ ಸುರೇಶ್, ರಾಜಕೀಯ ಪ್ರಕ್ರಿಯೆಗಳನ್ನು ಷಡ್ಯಂತ್ರ ಅಂತ ಕುಮಾರಸ್ವಾಮಿ ಹೇಳಬಾರದು, ತಮ್ಮ ಮಗನನ್ನು ಚುನಾವಣೆಗೆ ನಿಲ್ಲಿಸಬೇಕೆಂದುಕೊಂಡಿದ್ದರು, ಅದರಲ್ಲಿ ಯಶ ಕಂಡಿದ್ದಾರೆ, ಅವರ ಹೋರಾಟ ಅವರಿಗೆ ನಮ್ಮ ಹೋರಾಟ ನಮಗೆ ಎಂದು ಹೇಳಿದರು. ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧಿಸುತ್ತಿರುವುದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನವೇನೂ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ದುಡಿಯುತ್ತಿದ್ದಾರೆ ಎಂದು ಸುರೇಶ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸರ್ಕಾರ ಅಸ್ಥಿರಗೊಳಿಸಲು ಇಡಿ, ಐಟಿ, ಸಿಬಿಐ ಬಳಕೆ: ಕೇಂದ್ರದ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ