ರಾಜಕೀಯ ಮತ್ತು ಸ್ನೇಹ ಬೇರೆ ಬೇರೆ, ನಾನು ಮತ್ತು ಯಡಿಯೂರಪ್ಪ ಅಣ್ಣತಮ್ಮಂದಿರಂತೆ: ಕೆಎಸ್ ಈಶ್ವರಪ್ಪ

Updated on: Jun 17, 2025 | 7:24 PM

ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಯ ಶಪಥಗೈದಿರುವಂತೆ ರಾಜ್ಯ ಬಿಜೆಪಿಯ ಶುದ್ಧೀಕರಣ ಆಗದ ಹೊರತು ತಾನು ಬಿಜೆಪಿಗೆ ವಾಪಸ್ಸು ಹೋಗೋದಿಲ್ಲ ಎಂದು ಹೇಳುವ ಈಶ್ವರಪ್ಪ, ತಂದೆ ಮಗನ ಕೈಯಿಂದ ಬಿಜೆಪಿ ಮುಕ್ತಿಹೊಂದಿ ಸಾಮೂಹಿಕ ನಾಯಕತ್ವಕ್ಕೆ ಒತ್ತು ಸಿಗಬೇಕು ಎಂದರು. ಬಿಜೆಪಿಯ ಹಿಂದಿನ ದಿನಗಳನ್ನು ಮೆಲಕು ಹಾಕುವುದನ್ನು ಈಶ್ವರಪ್ಪ ಮರೆಯಲಿಲ್ಲ.

ಕೊಪ್ಪಳ, ಜೂನ್ 17: ನಗರದಲ್ಲಿಂದು ಸುದ್ದಿಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮಾಜಿ ಶಾಸಕ ಕೆಎಸ್ ಈಶ್ವರಪ್ಪ ತಾನು ಮತ್ತು ಬಿಎಸ್ ಯಡಿಯೂರಪ್ಪ (BS Yediyurappa) ಅಣ್ಣತಮ್ಮಂದಿರಂತೆ, ರಾಜಕೀಯವೇ ಬೇರೆ, ಸ್ನೇಹ-ವಿಶ್ವಾಸವೇ ಬೇರೆ ಎಂದು ಹೇಳಿದರು. ಮೊನ್ನೆ ತನಗೆ ಮೈಯಲ್ಲಿ ಹುಷಾರಿರಲಿಲ್ಲ, ಯಡಿಯೂರಪ್ಪ ಫೋನ್ ಮಾಡಿ ಆರೋಗ್ಯ ವಿಚಾರಿಸಿದರು, ಹಾಗೆಯೇ ತನ್ನ ಹುಟ್ಟುಹಬ್ಬದಂದು ತಂದೆ ಮತ್ತು ಮಗ ಫೋನ್ ಮಾಡಿ ಶುಭಕೋರಿದರು, ಹಾಗೆಯೇ ರಾಘವೇಂದ್ರನ ಮಗನ ಮದುವೆ ತಾನು ಹೋಗಿದ್ದಾಗಿ ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:  ದೇವರು ಈಶ್ವರಪ್ಪ ಮತ್ತು ನನಗೆ ಒಳ್ಳೆಯ ಸಂತಾನವನ್ನು ದಯಪಾಲಿಸಿದ್ದಾನೆ: ಬಸನಗೌಡ ಪಾಟೀಲ್ ಯತ್ನಾಳ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More