AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಶ್ರೀರಂಗಪಟ್ಟಣದ ಗೆಂಡೆ ಹೊಸಹಳ್ಳಿ ಬಳಿ ಚುನಾವಣಾಧಿಕಾರಿಗಳಿಂದ ಬಿವೈ ವಿಜಯೇಂದ್ರ ಕಾರು ತಪಾಸಣೆ

Karnataka Assembly Polls: ಶ್ರೀರಂಗಪಟ್ಟಣದ ಗೆಂಡೆ ಹೊಸಹಳ್ಳಿ ಬಳಿ ಚುನಾವಣಾಧಿಕಾರಿಗಳಿಂದ ಬಿವೈ ವಿಜಯೇಂದ್ರ ಕಾರು ತಪಾಸಣೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Apr 22, 2023 | 6:53 PM

Share

ತಮ್ಮ ಕಾರನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸುವಾಗ ಮುಂದಿನ ಸೀಟಿನಲ್ಲಿ ಕುಳಿತಿದ್ದ ವಿಜಯೇಂದ್ರ ತನಗೂ ಅದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಪೋನಲ್ಲಿ ಮಾತಾಡುತ್ತಿರುತ್ತಾರೆ.

ಮಂಡ್ಯ: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪ್ರಯಾಣಿಸುತ್ತಿದ್ದ ಕಾರನ್ನು ಚುನಾವಣಾಧಿಕಾರಿಗಳು (poll officials) ಶ್ರೀರಂಗಪಟ್ಟಣ (Srirangapatna) ತಾಲ್ಲೂಕಿನ ಗೆಂಡೆ ಹೊಸಹಳ್ಳಿ ಬಳಿ ತಡೆದು ಪರಿಶೀಲನೆ ನಡೆಸಿದರು. ವಿಜಯೇಂದ್ರ.], ಪಾಂಡವಪುರದಲ್ಲಿ ಪಕ್ಷದ ಅಭ್ಯರ್ಥಿ ಡಾ ಇಂದ್ರೇಶ್ ಪರ ಪ್ರಚಾರ ನಡೆಸಿ ಮಳವಳ್ಳಿಗೆ ಹೋಗುವಾಗ ಅವರ ಕಾರಿನ ತಪಾಸಣೆ ನಡೆಸಲಾಯಿತು. ತಮ್ಮ ಕಾರನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸುವಾಗ ಮುಂದಿನ ಸೀಟಿನಲ್ಲಿ ಕುಳಿತಿದ್ದ ವಿಜಯೇಂದ್ರ ತನಗೂ ಅದಕ್ಕೂ ಸಂಬಂಧವೇ ಇಲ್ಲವೇನೋ ಎಂಬಂತೆ ಪೋನಲ್ಲಿ ಮಾತಾಡುತ್ತಿರುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Apr 22, 2023 06:53 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.