AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರಿಗಿಂತ ಮೊದಲು ಮುನಿರತ್ನನನ್ನು ಮಂಪರು ಪರೀಕ್ಷೆಗೊಳಪಡಿಸಬೇಕು: ಕೆ ಎನ್ ರಾಜಣ್ಣ

ಎಲ್ಲರಿಗಿಂತ ಮೊದಲು ಮುನಿರತ್ನನನ್ನು ಮಂಪರು ಪರೀಕ್ಷೆಗೊಳಪಡಿಸಬೇಕು: ಕೆ ಎನ್ ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 24, 2025 | 11:21 AM

Share

ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿರುವುದಕ್ಕೆ ದೂರು ಸಲ್ಲಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ರಾಜಣ್ಣ ಸೂಕ್ತ ಸಮಯದಲ್ಲಿ ದೂರು ಸಲ್ಲಿಸಲಾಗುವುದು ಎಂದು ಹೇಳಿದರು, ಸದ್ಯಕ್ಕೆ ತಾನೀಗ ತುರುವೇಕೆರೆಗೆ ಹೋಗುತ್ತಿರುವುದಾಗಿ ಹೇಳಿದ ಸಹಕಾರ ಸಚಿವ ಅಲ್ಲಿಂದ ವಾಪಸ್ಸು ಬಂದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸವಿಸ್ತಾರವಾಗಿ ಮಾತಾಡುತ್ತೇನೆಂದು ಹೇಳಿದರು.

ತುಮಕೂರು, ಮಾರ್ಚ್ 24: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಒಂದೇ ಸಮನೆ ಆರೋಪಗಳನ್ನು ಮಾಡುತ್ತಿರುವ ರಾಜಾರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆ? ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಹೇಳುವ ಪ್ರಕಾರ ಹೌದು. ಶಿವಕುಮಾರ್​​​ರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಮುನಿರತ್ನ ಹೇಳುತ್ತಿದ್ದಾರಲ್ಲ ಅಂತ ಹೇಳಿದಾಗ, ಅವರೇನು ಹೇಳಿದ್ದಾರೆಂದು ಗೊತ್ತಿಲ್ಲ, ಆದರೆ ಮೊದಲೆಲ್ಲ ಶಿವಕುಮಾರ್ ಜೊತೆಗಿದ್ದ ಬಿಜೆಪಿ ಶಾಸಕನ ಮೇಲೆಯೇ ಮೊದಲು ಆ ಪರೀಕ್ಷೆ ನಡೆಸಬೇಕು ಎಂದು ರಾಜಣ್ಣ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜಣ್ಣ ಮಾಡಿರುವ ಹನಿ ಟ್ರ್ಯಾಪ್ ಆರೋಪ ಬಹಳ ಸೂಕ್ಷ್ಮ, ಆಫ್ ದಿ ಕಫ್ ಪ್ರತಿಕ್ರಿಯೆ ನೀಡಲ್ಲ: ಪರಮೇಶ್ವರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.