ಅತ್ಯಾಚಾರಿಗಳಿಗೆ ತಕ್ಷಣಕ್ಕೆ ಕಠಿಣದಲ್ಲೇ ಕಠಿಣ ಶಿಕ್ಷೆ ನೀಡಬೇಕು; ನಟಿ ಪೂಜಾ ಗಾಂಧಿ ಆಗ್ರಹ
‘ಗ್ಯಾಂಗ್ ರೇಪ್ನಂತಹ ಪ್ರಕರಣ ಬೇರೆ ರಾಜ್ಯದಲ್ಲಿ ಕೇಳುತ್ತಿದ್ದೆವು. ಈಗ ಕರ್ನಾಟಕದಲ್ಲಿ ಇದು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ’ ಎಂದಿದ್ದಾರೆ ಪೂಜಾ ಗಾಂಧಿ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ‘ಗ್ಯಾಂಗ್ ರೇಪ್ನಂತಹ ಪ್ರಕರಣ ಬೇರೆ ರಾಜ್ಯದಲ್ಲಿ ಕೇಳುತ್ತಿದ್ದೆವು. ಈಗ ಕರ್ನಾಟಕದಲ್ಲಿ ಇದು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ’ ಎಂದಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಪೂಜಾ ಗಾಂಧಿ, ‘ರೇಪ್ ಆರೋಪಿಗಳಿಗೆ ಕಠಿಣಕ್ಕಿಂತ ಕಠಿಣ ಶಿಕ್ಷೆ ಆಗಬೇಕು. ಹೆಣ್ಮಕ್ಕಳು ಅಷ್ಟೊತ್ತಲ್ಲಿ ಏಕೆ ಹೋಗಬೇಕು ಅನ್ನೋದು ತಪ್ಪು. ರಾಜಕಾರಣಿಗಳೇ ಆ ರೀತಿಯಾಗಿ ಮಾತನಾಡೋದು ತಪ್ಪು. ಬೇರೆಯವರು ರೇಪ್ ಮಾಡುವ ಮುಂಚೆ ಹೆದರಬೇಕು. ಅತ್ಯಾಚಾರಿಗಳು ಹೆದರುವಂತಹ ಶಿಕ್ಷೆ ಕೊಡಬೇಕು’ ಎಂದಿದ್ದಾರೆ ಪೂಜಾ ಗಾಂಧಿ.
ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಇಡೀ ರಾಜ್ಯಾದ್ಯಂತ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಬಗ್ಗೆ ಸಾಕಷ್ಟು ಸೆಲೆಬ್ರಿಟಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇದನ್ನೂ ಓದಿ: ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡೆಯಲು ಸಚಿವ ಅಶ್ವತ್ಥನಾರಾಯಣ ಆದೇಶ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!

