ಅತ್ಯಾಚಾರಿಗಳಿಗೆ ತಕ್ಷಣಕ್ಕೆ ಕಠಿಣದಲ್ಲೇ ಕಠಿಣ ಶಿಕ್ಷೆ ನೀಡಬೇಕು; ನಟಿ ಪೂಜಾ ಗಾಂಧಿ ಆಗ್ರಹ

| Updated By: ರಾಜೇಶ್ ದುಗ್ಗುಮನೆ

Updated on: Aug 28, 2021 | 4:18 PM

‘ಗ್ಯಾಂಗ್ ರೇಪ್​​ನಂತಹ ಪ್ರಕರಣ ಬೇರೆ ರಾಜ್ಯದಲ್ಲಿ ಕೇಳುತ್ತಿದ್ದೆವು. ಈಗ ಕರ್ನಾಟಕದಲ್ಲಿ ಇದು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ’ ಎಂದಿದ್ದಾರೆ ಪೂಜಾ ಗಾಂಧಿ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೂಜಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ‘ಗ್ಯಾಂಗ್ ರೇಪ್​​ನಂತಹ ಪ್ರಕರಣ ಬೇರೆ ರಾಜ್ಯದಲ್ಲಿ ಕೇಳುತ್ತಿದ್ದೆವು. ಈಗ ಕರ್ನಾಟಕದಲ್ಲಿ ಇದು ನಡೆದಿರೋದು ನಿಜಕ್ಕೂ ಬೇಸರದ ಸಂಗತಿ’ ಎಂದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಪೂಜಾ ಗಾಂಧಿ, ‘ರೇಪ್​​ ಆರೋಪಿಗಳಿಗೆ ಕಠಿಣಕ್ಕಿಂತ ಕಠಿಣ ಶಿಕ್ಷೆ ಆಗಬೇಕು. ಹೆಣ್ಮಕ್ಕಳು ಅಷ್ಟೊತ್ತಲ್ಲಿ ಏಕೆ ಹೋಗಬೇಕು ಅನ್ನೋದು ತಪ್ಪು. ರಾಜಕಾರಣಿಗಳೇ ಆ ರೀತಿಯಾಗಿ ಮಾತನಾಡೋದು ತಪ್ಪು. ಬೇರೆಯವರು ರೇಪ್ ಮಾಡುವ ಮುಂಚೆ ಹೆದರಬೇಕು. ಅತ್ಯಾಚಾರಿಗಳು ಹೆದರುವಂತಹ ಶಿಕ್ಷೆ ಕೊಡಬೇಕು’ ಎಂದಿದ್ದಾರೆ ಪೂಜಾ ಗಾಂಧಿ.

ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಇಡೀ ರಾಜ್ಯಾದ್ಯಂತ ಚರ್ಚೆಯನ್ನು ಹುಟ್ಟು ಹಾಕಿದೆ. ಈ ಬಗ್ಗೆ ಸಾಕಷ್ಟು ಸೆಲೆಬ್ರಿಟಿಗಳು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರಕ್ಕೆ ನಿರ್ಬಂಧ; ಸುತ್ತೋಲೆ ವಾಪಸ್ ಪಡೆಯಲು ಸಚಿವ ಅಶ್ವತ್ಥನಾರಾಯಣ ಆದೇಶ

Follow us on