ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ

Updated on: Dec 10, 2023 | 9:10 PM

Pooja Gandhi: ಕನ್ನಡತಿಯೇ ಆಗಿಬಿಟ್ಟಿರುವ ಪೂಜಾ ಗಾಂಧಿ ಇತ್ತೀಚೆಗೆ ಮಂತ್ರಮಾಂಗಲ್ಯ ಮಾದರಿಯಲ್ಲಿ ವಿವಾಹವಾದರು. ಇದೀಗ ಬಸವಣ್ಣನ ವಚನ ಹೇಳಿ ಮತ್ತೆ ಕನ್ನಡಿಗರ ಮನಸ್ಸು ಗೆದ್ದಿದ್ದಾರೆ.

ನಟಿ ಪೂಜಾ ಗಾಂಧಿ (Pooja Gandhi) ಇತ್ತೀಚೆಗಷ್ಟೆ ವಿವಾಹವಾದರು. ತಮ್ಮ ಆಮಂತ್ರಣ ಪತ್ರಿಕೆಯನ್ನು ತಾವೇ ಸ್ವತಃ ಕನ್ನಡದಲ್ಲಿ ಬರೆದು ತಮ್ಮ ಕನ್ನಡ ಪ್ರೇಮ ಮೆರೆದಿದ್ದರು. ಅದಾದ ಬಳಿಕ ಮದುವೆಯನ್ನು ಸಹ ಕುವೆಂಪು ಅವರ ಆದರ್ಶವಾದ ಮಂತ್ರಮಾಂಗಲ್ಯ ಮಾದರಿಯಲ್ಲಿ ಆದರು. ಪೂಜಾ ಗಾಂಧಿ ಅವರ ಈ ಕಾರ್ಯ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಪೂಜಾ ಗಾಂಧಿ, ಬಸವಣ್ಣನ ವಚನ ಹೇಳಿ ನೆರೆದವರು ಆಶ್ಚರ್ಯಚಕಿತಗೊಳ್ಳುವಂತೆ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More