ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ

Edited By:

Updated on: Jan 22, 2024 | 2:56 PM

ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.

ಗದಗ, ಜ.22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ (Ayodhya Ram Mandir) ಹಿನ್ನೆಲೆಯಲ್ಲಿ ಗದಗ ಗ್ರಾಮದ ಮಸೀದಿಯೊಂದರಲ್ಲಿ (Masjid) ಪೂಜೆ, ಹೋಮ ನೆರವೇರಿಸಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ.

ರುದ್ರಾಭಿಷೇಕ ಮಾಡಿ, ಭಾರತಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ್ದಾರೆ. ರಂಜಾನ್ ತಿಂಗಳಲ್ಲಿ ಪೂಜಿಸುವ ಆಲಿ ದೇವರ ಸಮ್ಮುಖದಲ್ಲಿ ಭಾರತ ಮಾತೆ ಫೋಟೋಗೆ ಪೂಜೆ ಸಲ್ಲಿಸಲಾಗಿದೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More