ಬಡ ಹೃದ್ರೋಗಿಗಳ ಆಶಾಕಿರಣ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ನಾಳೆ ಮುಕ್ತಾಯ

ಸರಕಾರಿ ಸ್ವಾಯತ್ತತೆಯ ಆಸ್ಪತ್ರೆಯೊಂದು ಒಂದು ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ನೆರವು, ಸೌಲಭ್ಯಗಳು, ಶ್ರೀಮಂತರಿಗೆ ಸಿಗುವ ಶ್ರೀಮಂತ ಚಿಕಿತ್ಸೆ ಬಡವರಿಗೆ, ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡುವುದು ತನ್ನ ತಪಸ್ಸಾಗಿತ್ತು ಅದು ಈಡೇರಿದೆ, ಹಾಗಾಗಿ ಸಂತೃಪ್ತ ಭಾವದಿಂದ ನಿವೃತ್ತನಾಗುತ್ತಿದ್ದೇನೆ ಎಂದು ಡಾ ಮಂಜುನಾಥ್ ಹೇಳುತ್ತಾರೆ.

ಬಡ ಹೃದ್ರೋಗಿಗಳ ಆಶಾಕಿರಣ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ನಾಳೆ ಮುಕ್ತಾಯ
|

Updated on: Jan 30, 2024 | 6:55 PM

ಬೆಂಗಳೂರು: ವಿಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ (Dr CN Manjunath) ಸೇವಾವಧಿ ಕೊನೆಗೊಳ್ಳುತ್ತಿದೆಯೇ ಹೊರತು ಅವರ ವೃತ್ತಿ ಮತ್ತು ಪ್ರವೃತ್ತಿಗೆ ನಿವೃತ್ತಿ ಇಲ್ಲ. ನಮ್ಮ ನಾಡು ಕಂಡ ಮಹಾನ್ ವೈದ್ಯರಲ್ಲಿ ಡಾ ಮಂಜುನಾಥ ಒಬ್ಬರು. ಅವರನ್ನು ವೈದ್ಯ ಅನ್ನೋದಕ್ಕಿಂತ ಒಬ್ಬ ದಾರ್ಶನಿಕ (visionary) ಅನ್ನೋದು ಹೆಚ್ಚು ಸೂಕ್ತ. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು (Sri Jayadeva Institute of Cardiovascular Sciences and Research) ಕಟ್ಟಿ ಬೆಳಸಿ ಅವರೇ ಹೇಳುವಂತೆ ಒಬ್ಬ ತಪಸ್ವೀಯಂತೆ 16 ವರ್ಷಗಳ ಕಾಲ ಸೇವೆ ಮಾಡುತ್ತಾ, ಲಕ್ಷಾಂತರ ಹೃದ್ರೋಗಿಗಳಿಗೆ ಹೊಸ ಜನ್ಮ ನೀಡಿದ ಅವರು ನಾಳೆ ಅಂದರೆ ಜನವರಿ 31 ರಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕನ ಸ್ಥಾನದಿಂದ ನಿವೃತ್ತರಾಗುತ್ತಿದ್ದಾರೆ.

ಸರಕಾರಿ ಸ್ವಾಯತ್ತತೆಯ ಆಸ್ಪತ್ರೆಯೊಂದು ಒಂದು ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ನೆರವು, ಸೌಲಭ್ಯಗಳು, ಶ್ರೀಮಂತರಿಗೆ ಸಿಗುವ ಶ್ರೀಮಂತ ಚಿಕಿತ್ಸೆ ಬಡವರಿಗೆ, ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡುವುದು ತನ್ನ ತಪಸ್ಸಾಗಿತ್ತು ಅದು ಈಡೇರಿದೆ, ಹಾಗಾಗಿ ಸಂತೃಪ್ತ ಭಾವದಿಂದ ನಿವೃತ್ತನಾಗುತ್ತಿದ್ದೇನೆ ಎಂದು ಡಾ ಮಂಜುನಾಥ್ ಹೇಳುತ್ತಾರೆ. ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ನೆರವಾದ ಸರಕಾರ, ಮತ್ತು ದಾನಿಗಳನ್ನು ಡಾ ಮಂಜುನಾಥ್ ಕೃತಜ್ಞತೆಯಿಂದ ನೆನೆಯುತ್ತಾರೆ.

ಹಣವಿಲ್ಲದೆ, ಸೂಕ್ತ ದಾಖಲಾತಿಗಳಿಲ್ಲದೆ ಚಿಕಿತ್ಸೆಗೆ ಬರುತ್ತಿದ್ದ ಹೃದ್ರೋಗಿಗಳು ಗುಣಮುಖರಾಗಿ ಅವರ ಕುಟುಂಬ ಸದಸ್ಯರೊಂದಿಗೆ ನಗುನಗುತ್ತಾ ಮನೆಗೆ ಹೋಗುವ ದೃಶ್ಯ ತನ್ನಲ್ಲಿ ಸಾರ್ಥಕತೆಯ ಭಾವ ಮೂಡಿಸುತ್ತಿತ್ತು ಎಂದು ಡಾ ಮಂಜುನಾಥ್ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ