ವೀರಶೈವ ಲಿಂಗಾಯುತರ ಸಂಖ್ಯೆ ಜಾಸ್ತಿಯಿದೆ, ಮತ್ತೊಮ್ಮೆ ಜಾತಿ ಗಣತಿ ಮಾಡಿಸಬೇಕು: ವೀಣಾ ಕಾಶಪ್ಪನವರ್

ಅರುಣ್​ ಕುಮಾರ್​ ಬೆಳ್ಳಿ

Updated on: May 03, 2025 | 6:18 PM

ತಮ್ಮ ಪತಿ ಕಾಶಪ್ಪನವರ್ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ನಡೆಯುತ್ತಿರುವ ಮಾತಿನ ಯುದ್ಧದ ಬಗ್ಗೆ ವೀಣಾ ಕಾಮೆಂಟ್ ಮಾಡಲಿಲ್ಲ. ಅದು ಅವರವರ ವೈಯಕ್ತಿಕ ವಿಚಾರ, ಯತ್ನಾಳ್ ಪ್ರತಿದಿನ ಹೇಳಿಕೆ ನೀಡುತ್ತಿರುವುದನ್ನು ಗಮನಿಸುತ್ತಿದ್ದೇನೆ, ಅದೇನೆ ಇದ್ದರೂ ಗುರುಗಳು ಅವರಿಗೆ ಮಾರ್ಗದರ್ಶನ ಮಾಡಬೇಕು, ತನಗೆ ನೀಡಿರುವ ಜವಾಬ್ದಾರಿ ನಿಭಾಯಿಸುವುದಷ್ಟೇ ತನ್ನ ಕೆಲಸ ಎಂದು ವೀಣಾ ಹೇಳಿದರು.

ದಾವಣಗೆರೆ, ಮೇ 3: ಕಾಂಗ್ರೆಸ್ ನಾಯಕಿ ಮತ್ತು ಹುನುಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರದಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಜನ ಗಣತಿಯ ಜೊತೆ ಜಾತಿ ಗಣತಿ ಸಹ ಮಾಡಿಸಲು ನಿರ್ಧಾರ ತೆಗೆದುಕೊಂಡಿರುವುದನ್ನು ಸ್ವಾಗತಿಸಿದರು. ರಾಜ್ಯ ಸರ್ಕಾರ ಮಾಡಿಸಿರುವ ಜಾತಿ ಗಣತಿ ಸರಿಯಿಲ್ಲ ಅಂತ ಹೇಳಲಾಗುತ್ತಿದೆ, ಅದನ್ನು ಮತ್ತೊಮ್ಮೆ ಮಾಡಿಸಿದರೆ ಚೆನ್ನಾಗಿರುತ್ತದೆ. ಯಾಕೆಂದರೆ, ಆ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ವೀರಶೈವ ಲಿಂಗಾಯತರು 65ಲಕ್ಷ ಇದ್ದಾರೆ ಅಂತ ಹೇಳಲಾಗುತ್ತಿದೆ, ಅದರೆ ವಾಸ್ತವದಲ್ಲಿ ಉಪ ಪಂಗಡಗಳನ್ನು ಸೇರಿಸಿದರೆ ಲಿಂಗಾಯತರ ಸಂಖ್ಯೆ ಹೆಚ್ಚಾಗುತ್ತದೆ ಎಂದು ಹೇಳಿದ ವೀಣಾ ಈ ನಿಟ್ಟಿನಲ್ಲಿ ತಮ್ಮ ರಾಷ್ಟ್ರೀಯ ಅಧ್ಯಕ್ಷರು ತೆಗೆದುಕೊಳ್ಳುವ ನಿಲುವಿಗೆ ಬದ್ಧರಾಗಿರುತ್ತೇವೆ ಎಂದರು.

ಇದನ್ನೂ ಓದಿ: ಯತ್ನಾಳ್​ಗೆ ತಾಕತ್ತಿದ್ದರೆ ಬಿಜೆಪಿಗೆ ರಾಜೀನಾಮೆ ನೀಡಿ ಚುನಾವಣೆ ಗೆದ್ದು ತೋರಿಸಲಿ: ವಿಜಯಾನಂದ್ ಕಾಶಪ್ಪನವರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.