ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್, ಮನೆ ಬೆಳಗಲು ಜೀವವನ್ನೇ ಒತ್ತೆಯಿಟ್ಟ ವಿಡಿಯೋ ನೋಡಿ

ಐದು ನಿಮಿಷ ಕರೆಂಟ್ ಹೋಯ್ತು ಅಂದರೆ ಸಾಕು ಜನ ಲೈನ್​ಮ್ಯಾನ್​​ಗಳಿಗೆ ಫೋನ್ ಹಾಕ್ತಾರೆ, ಅಧಿಕಾರಿಗಳಿಗೆ ತರಾಟೆ ತೆಗೆದುಕೊಳ್ತಾರೆ. ಆದ್ರೆ, ಪವರ್ ಮ್ಯಾನ್​ ಒಬ್ಬರು ಜೀವವನ್ನೇ ಅಡವಿಟ್ಟು ನೆರೆಪೀಡಿತ ಪ್ರದೇಶದಲ್ಲಿ ನೀರಿನಲ್ಲೇ ಈಜಿಕೊಂಡು ಹೋಗಿ ವಿದ್ಯುತ್ ಸರಿಪಡಿಸಿದ್ದಾರೆ.

ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್, ಮನೆ ಬೆಳಗಲು ಜೀವವನ್ನೇ ಒತ್ತೆಯಿಟ್ಟ ವಿಡಿಯೋ ನೋಡಿ
| Updated By: ರಮೇಶ್ ಬಿ. ಜವಳಗೇರಾ

Updated on:Jul 21, 2024 | 5:09 PM

ಶಿವಮೊಗ್ಗ, (ಜುಲೈ 21): ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಮಾಡುತ್ತಿರುವ ಅವಾಂತರ ಅಷ್ಟಿಷ್ಟಲ್ಲ. ಈ ಭಾಗಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮನೆ, ಮಠ, ಹೊಲ, ಗದ್ದೆಗಳನ್ನು ಕಳೆದುಕೊಂಡು ಗೋಳಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿರುವಾಗ ರಣ ಭಯಂಕರ ಮಳೆಯ ನಡುವೆಯೂ ವಿದ್ಯುತ್ ಇಲಾಖೆಯ ಪ್ರಾಮಾಣಿಕ ಸಿಬ್ಬಂದಿ ಬೆಳಕು ನೀಡುವ ಕೆಲಸ ಮಾಡುತ್ತಿದ್ದಾರೆ. ಬದುಕನ್ನು ತಂತಿಯ ಮೇಲಿನ ನಡುಗೆಯಂತೆ ಇಟ್ಟು, ಜೀವದ ಹಂಗು ತೊರೆದು ಲೈನ್​ಗಳಲ್ಲಿ ಸುಗಮ ವಿದ್ಯುತ್ ಪ್ರಸರಣಕ್ಕೆ ಕಷ್ಟ ಪಡುತ್ತಿದ್ದಾರೆ. ಅಂತೆಯೇ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ನೆರೆ ಉಂಟಾಗಿದ್ದು,
ಈ ನೆರೆ ನೀರಿನಲ್ಲೇ ಪ್ರಾಣದ ಹಂಗು ತೊರೆದು ಪವರ್ ಮ್ಯಾನ್ ಈಜಿಕೊಂಡು ತೆರಳಿ ವಿದ್ಯುತ್ ದುರಸ್ತಿಪಡಿಸಿದ್ದಾರೆ.

ಧಾರಾಕಾರ ಗಾಳಿ ಮಳೆಗೆ ಕಳೆದ ಐದಾರು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಇದನ್ನ ಅರಿತ  ಪವರ್ ಮ್ಯಾನ್ ಸಂತೋಷ್ ಕಲ್ಬುರ್ಗಿ ಎನ್ನುವರು ನೀರಿನಲ್ಲಿ ಈಜಿಕೊಂಡು ಹೋಗಿ ವಿದ್ಯುತ್ ಸರಿ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಅಗಿದೆ. ಸಂತೋಷ್ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.

 

Published On - 5:08 pm, Sun, 21 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ