ಕುರ್ಚಿ ಕದನಕ್ಕೆ ಸ್ಫೋಟಕ ತಿರುವು:ವೈಲೆಂಟ್ ಆಗಿದ್ದ ಡಿಕೆಶಿ ಏಕಾಏಕಿ ಸಿದ್ದರಾಮಯ್ಯ ಬಗ್ಗೆ ಸೈಲೆಂಟ್ ಮಾತು

Updated on: Nov 24, 2025 | 7:34 PM

ಎರಡ್ಮೂರು ದಿನಗಳಿಂದ ಸಿಎಂ ಬಗ್ಗೆ ಮಾರ್ಮಿಕವಾಗಿ ಮಾತನಾಡುತ್ತ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಏಕಾಏಕಿ ವರಸೆ ಬದಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುವ ರೀತಿಯಲ್ಲೇ ಮಾತನಾಡುತ್ತಿದ್ದ ಡಿಕೆಶಿ, ಈಗ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಕೆಲಸ ಮಾಡ್ತೀವಿ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ ಎಂದು ಸಾಫ್ಟ್​ ಹೇಳಿಕೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ. ದಿಢೀರ್ ಡಿಕೆಶಿ ಸಾಫ್ಟ್​ ಆಗಿದ್ಯಾಕೆ ಎನ್ನುವ ಕುತೂಹಲ ಮೂಡಿಸಿದೆ.

ಬೆಂಗಳೂರು, (ನವೆಂಬರ್ 24): ಕಳೆದ ಮೂರ್ನಾಲ್ಕು ದಿನದಿಂದ ರಾಜ್ಯ ಕಾಂಗ್ರೆಸ್​​ನ ಪಟ್ಟದ ಆಟ ರಂಗೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಂಡು ಕಾಣದಂತೆ ತಂತ್ರ ಹೆಣೆಯುತ್ತಿದ್ದಾರೆ. ಈ ನಡುವೆ ಕನಕಪುರ ಬಂಡೆ ಬೆಂಬಲಿಗರು ಯಥಾ ಪ್ರಕಾರ, ದೆಹಲಿ ದಂಡಯಾತ್ರೆ ಮುಂದುವರೆಸಿದ್ದಾರೆ. ಡಿಕೆಯ ಎರಡನೇ ಬಣ ಇಂದು ರಾಷ್ಟ್ರ ರಾಜಕಾರಣದ ಹೆಡ್ ಕ್ವಾಟ್ರಸ್​ನಲ್ಲಿ ತಮ್ಮ ನಾಯಕನ ಪರ ದಾಳ ಉರುಳಿಸಿದ್ದಾರೆ. ಹೀಗಾಗಿ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣ ಬಡಿದಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಎರಡ್ಮೂರು ದಿನಗಳಿಂದ ಸಿಎಂ ಬಗ್ಗೆ ಮಾರ್ಮಿಕವಾಗಿ ಮಾತನಾಡುತ್ತ ಬಂದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಏಕಾಏಕಿ ವರಸೆ ಬದಲಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಡುವ ರೀತಿಯಲ್ಲೇ ಮಾತನಾಡುತ್ತಿದ್ದ ಡಿಕೆಶಿ, ಈಗ ಸಿದ್ದರಾಮಯ್ಯ ಮಾರ್ಗದರ್ಶನದಲ್ಲಿ ಕೆಲಸ ಮಾಡ್ತೀವಿ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ ಎಂದು ಸಾಫ್ಟ್​ ಹೇಳಿಕೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ. ದಿಢೀರ್ ಡಿಕೆಶಿ ಸಾಫ್ಟ್​ ಆಗಿದ್ಯಾಕೆ ಎನ್ನುವ ಕುತೂಹಲ ಮೂಡಿಸಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More