AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್?

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್?

ಪ್ರಸನ್ನ ಗಾಂವ್ಕರ್​
| Edited By: |

Updated on:Feb 18, 2026 | 9:48 AM

Share

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತು ಬಿಕ್ಕಟ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿಂದಿನ ಒಪ್ಪಂದದ ಬಗ್ಗೆ ಪದೇ ಪದೇ ಪ್ರಸ್ತಾಪಿಸಿ, ಸೂಕ್ತ ಸಮಯದಲ್ಲಿ ಸಿಎಂ ಸಿದ್ದರಾಮಯ್ಯನವರೇ ಜನರಿಗೆ ಸಂದೇಶ ನೀಡುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಒಪ್ಪಂದವನ್ನು ನಿರಾಕರಿಸಿದರೂ, ಈ ಕುರಿತು ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ ಡಿಕೆ ಸುರೇಶ್ ಕೌಂಟರ್ ಕೊಟ್ಟಿದ್ದಾರೆ. ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು ಎಂದು ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 18, 2026 09:47 AM