ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

Edited By:

Updated on: Mar 28, 2026 | 11:03 PM

ದಾವಣಗೆರೆ ಉಪಚುನಾವಣೆ ಮುನ್ನ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣದ ಆರೋಪ ಎದುರಿಸಿದ್ದ ಶಾಸಕ ಪ್ರದೀಪ್ ಈಶ್ವರ್, ಸವಾಲು ಸ್ವೀಕರಿಸಿ ಬಿಜೆಪಿ ಕಚೇರಿ ಎದುರು ರ್‍ಯಾಲಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಧ್ವಜ ಹಾರಿಸಿದಾಗ, ಬಿಜೆಪಿ ಕಾರ್ಯಕರ್ತರು ಪೊರಕೆ, ಚಪ್ಪಲಿ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರದೀಪ್ ಈಶ್ವರ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಸಹ ಜಮಾಯಿಸಿದ್ದರು.

ದಾವಣಗೆರೆ, ಮಾರ್ಚ್​ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್​​ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More