AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜಾಸೇವಾ: ಜನರ ಸಮಸ್ಯೆ ಆಲಿಸಿದ ಸಿಎಂ; ಮಗುವಿನ ಆರೋಗ್ಯ ಸಮಸ್ಯೆ ಹೇಳಿ ಕಣ್ಣೀರಿಟ್ಟ ಮಹಿಳೆ

ಪ್ರಜಾಸೇವಾ: ಜನರ ಸಮಸ್ಯೆ ಆಲಿಸಿದ ಸಿಎಂ; ಮಗುವಿನ ಆರೋಗ್ಯ ಸಮಸ್ಯೆ ಹೇಳಿ ಕಣ್ಣೀರಿಟ್ಟ ಮಹಿಳೆ

ಗಂಗಾಧರ​ ಬ. ಸಾಬೋಜಿ
|

Updated on:Sep 05, 2026 | 4:40 PM

Share

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆಯ ವೆಬ್‌ಸೈಟ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಚೆಕ್‌ಗಳನ್ನು ವಿತರಿಸಲಾಯಿತು. ವೇದಿಕೆ ಬಳಿಯೇ ಜನರ ಅಹವಾಲುಗಳನ್ನು ಆಲಿಸಿದ ಸಿಎಂ, ಕಣ್ಣೀರಿಡುತ್ತಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿ ಶಾಸಕರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

ವಿಜಯನಗರ, ಸೆಪ್ಟೆಂಬರ್​ 05: ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ‘ಪ್ರಜಾಸೇವೆ ಇಲಾಖೆ’ ವೆಬ್‌ಸೈಟ್ ಅನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳು ಹಾಗೂ ಚೆಕ್‌ಗಳನ್ನು ವಿತರಿಸಿದರು. ಬಳಿಕ ಸಿಎಂ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು. ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುತ್ತಾ, ಮನವಿಗಳನ್ನು ಪಡೆದುಕೊಂಡರು. ಈ ವೇಳೆ, ತಮ್ಮ ಕಷ್ಟ ಹೇಳಿಕೊಳ್ಳಲು ಬಂದಿದ್ದ ಕೆಲ ಮಹಿಳೆಯರು ಡಿಕೆ ಶಿವಕುಮಾರ್ ಎದುರು ಕಣ್ಣೀರಿಟ್ಟರು. ಮಗುವನ್ನು ಎತ್ತಿಕೊಂಡು ಬಂದಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಆಲಿಸಿದ ಸಿಎಂ, ತಕ್ಷಣವೇ ಪರಿಹಾರ ಒದಗಿಸುವಂತೆ ಸ್ಥಳೀಯ ಶಾಸಕ ಶ್ರೀನಿವಾಸ್​​ಗೆ ಸೂಚನೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 05, 2026 04:38 PM

Follow Us